ಬೆಂಗಳೂರು: ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಂಕ್ಷನ್ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಘಟನೆಯೊಂದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿತು. ರಸ್ತೆ ಬದಿಯಲ್ಲಿ ಬಿಟ್ಟಿದ್ದ ಸೂಟ್ಕೇಸ್ನಿಂದ ಅಪಾರ ಪ್ರಮಾಣದ ನಗದು ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ನಲ್ಲಿದ್ದ ಒಬ್ಬ ಪ್ರಯಾಣಿಕ ತನ್ನ ಮದುವೆ ಖರ್ಚಿಗಾಗಿ ಬ್ಯಾಂಕ್ನಿಂದ 30 ಲಕ್ಷ ರೂ. ತೆಗೆಯಲಾಗಿತ್ತು. ಬಸ್ ಮೆಜೆಸ್ಟಿಕ್ ತಲುಪಿದಾಗ ಅವರು ತಮ್ಮ ಸೂಟ್ಕೇಸ್ ಕಾಣೆಯಾಗಿರುವುದು ಗಮನಿಸಿದರು. ತಕ್ಷಣವೇ ಬಸ್ ಕ್ಲೀನರ್ಗೆ ಮಾಹಿತಿ ನೀಡಲಾಯಿತು.
ಇದರ ನಡುವೆ, ಅಮೃತಹಳ್ಳಿ ಜಂಕ್ಷನ್ ಬಳಿ ಕೆಲವರು ಬಸ್ನಿಂದ ಇಳಿಯುವಾಗ ತಪ್ಪಾಗಿ ಆ ನಗದು ತುಂಬಿದ ಸೂಟ್ಕೇಸ್ ಸಹ ಇಳಿಸಲ್ಪಟ್ಟಿತ್ತು. ತಮಗೆ ಸೇರಿದ ವಸ್ತು ಅಲ್ಲವೆಂದು ಭಾವಿಸಿದವರು ಅದನ್ನು ರಸ್ತೆ ಬದಿಯಲ್ಲಿ ಬಿಟ್ಟು ತೆರಳಿದ್ದರು.
ಸ್ಥಳೀಯರು ಅನುಮಾನಾಸ್ಪದವಾಗಿ ಬಿದ್ದಿದ್ದ ಸೂಟ್ಕೇಸ್ ನೋಡಿ ಹೊಯ್ಸಳ ಗಸ್ತು ಸಿಬ್ಬಂದಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ, ಅದರೊಳಗೆ ದೊಡ್ಡ ಪ್ರಮಾಣದ ನಗದು ಇರುವುದನ್ನು ಪತ್ತೆಹಚ್ಚಿದರು.
ನಂತರ, ಬಸ್ ಕ್ಲೀನರ್ ಹಾಗೂ ಮಾಲೀಕರು ಅಮೃತಹಳ್ಳಿ ಠಾಣೆಗೆ ಬಂದು, ಬ್ಯಾಂಕ್ನಿಂದ ಹಣ ತೆಗೆಯಲಾದ ದಾಖಲೆಗಳನ್ನು ನೀಡಿದರು. ಎಲ್ಲಾ ಪರಿಶೀಲನೆಗಳ ಬಳಿಕ, ಪೊಲೀಸರು 30 ಲಕ್ಷ ರೂಪಾಯಿಗಳ ನಗದು ಮಾಲೀಕರಿಗೆ ಹಸ್ತಾಂತರಿಸಿದರು.
ಈ ಘಟನೆ ಸ್ಥಳೀಯರಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರ ತ್ವರಿತ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…