ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು ಮೈಸೂರಿನಲ್ಲಿ ಬೃಹತ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು ₹14.95 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಹನ ಮಾಲಕರಿಂದ ₹3.02 ಕೋಟಿ ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಬೃಹತ್ ಕಾರ್ಯಾಚರಣೆಯನ್ನು ಬೆಂಗಳೂರು ಕೇಂದ್ರದ ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ನಡೆಸಲಾಯಿತು. ಮೈಸೂರು ನಗರದ ವಿವಿಧ ಸ್ಥಳಗಳಲ್ಲಿ ತೆರಿಗೆ ಪಾವತಿ ತಪ್ಪಿಸಿ ಸಂಚರಿಸುತ್ತಿದ್ದ ರೋಲ್ಸ್ ರಾಯ್ಸ್ ಕುಲಿನನ್, ಎರಡು ಮರ್ಸಿಡಿಸ್ ಕಾರುಗಳು, ಪೋರ್ಷೆ ಕೇಮನ್ ಮತ್ತು ಆಡಿ ಎ4 ಕಾರುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮ ನೋಂದಣಿ ಮತ್ತು ರಾಜ್ಯ ಸರ್ಕಾರದ ತೆರಿಗೆ ಬಾಕಿಗೆ ಸಂಬಂಧಿಸಿದ ಗುಪ್ತ ಮಾಹಿತಿ ಆಧಾರದ ಮೇಲೆ ಈ ದಾಳಿ ನಡೆಯಿತು. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಿ ಪರಿಗಣಿಸಿರುವ ಅಧಿಕಾರಿಗಳು, ಸಂಬಂಧಪಟ್ಟ ವಾಹನ ಮಾಲಕರಿಗೆ ನಿಯಮಬದ್ಧವಾಗಿ ದಂಡ ವಿಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬೆಂಗಳೂರು ದಕ್ಷಿಣದ ಹಿರಿಯ ಮೋಟಾರು ನಿರೀಕ್ಷಕ ಎನ್. ರಂಜಿತ್, ಆರ್ಟಿಒ 55ರ ಹಿರಿಯ ನಿರೀಕ್ಷಕ ಇಮ್ತಿಯಾಝ್ ಪಾಷ, ಪಶ್ಚಿಮ ವಿಭಾಗದ ಮೋಟಾರು ನಿರೀಕ್ಷಕ ವಿಜಯ್ ಕುಮಾರ್, ವಲಯ 9ರ ಆರ್ಟಿಒ ರಾಮಚಂದ್ರ ಹಾಗೂ ಮೋಟಾರು ನಿರೀಕ್ಷಕ ಅಲಿ ಉದ್ದೀನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇಂತಹ ಆರ್ಟಿಒ ದಾಳಿಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣವಾಗಿ ನಡೆಯಲಿದ್ದು, ತೆರಿಗೆ ವಂಚನೆಗೆ ತಿರುಗು ಬಾಣವಾಗಲಿವೆ ಎಂಬುದು ಅಧಿಕಾರಿಗಳ ಎಚ್ಚರಿಕೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…