Latest

ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ ಮತ್ತು ಮಕ್ಕಳ ರಕ್ಷಣೆ.!: ಗೋಕರ್ಣದಲ್ಲಿ ಘಟನೆ

ಕುಮಟಾ, ಜುಲೈ 12 – ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥದ ದಟ್ಟ ಅರಣ್ಯ ಪ್ರದೇಶದಲ್ಲಿ ಎರಡು ಪುಟ್ಟ ಮಕ್ಕಳೊಂದಿಗೆ ಗುಹೆಯೊಂದರಲ್ಲಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆಯೊಬ್ಬರನ್ನು ಗೋಕರ್ಣ ಪೊಲೀಸರು ಪತ್ತೆಹಚ್ಚಿ ರಕ್ಷಿಸಿದ್ದಾರೆ. ಇದೀಗ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದೆ.

ಮೋಹಿ (40) ಎಂಬ ಈ ಮಹಿಳೆ, ತನ್ನ ಮಕ್ಕಳು ಪ್ರೆಯಾ (6) ಮತ್ತು ಅಮಾ (4)ರೊಂದಿಗೆ ಗುಹೆಯಲ್ಲೇ ವಾಸವಿದ್ದು, ದಿನಗಳನ್ನು ಧ್ಯಾನ, ಪೂಜಾ ಮತ್ತು ಪ್ರಾಕೃತಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದಳು. ಮೂಲತಃ ಬಿಸಿನೆಸ್ ವೀಸಾದಡಿ ರಷ್ಯಾದಿಂದ ಭಾರತಕ್ಕೆ ಬಂದಿದ್ದ ಈಕೆ, ಮೊದಲಿಗೆ ಗೋವಾಕ್ಕೆ ಆಗಮಿಸಿದ್ದು, ನಂತರ ಗೋಕರ್ಣದ ರಾಮತೀರ್ಥದ ಹತ್ತಿರದ ಒಂದು ಗುಹೆಯಲ್ಲಿ ನೆಲೆಸಿದ್ದರು.

ಸಂಪೂರ್ಣ ಆಂತರಿಕವಾದ ಜೀವನವೊಂದರೊಂದಿಗೆ ಈಕೆ ಗುಹೆಯಲ್ಲಿ ದಿನ ಕಳೆಯುತ್ತಿದ್ದ ಸಂದರ್ಭದಲ್ಲಿ, ಗೋಕರ್ಣ ಪೊಲೀಸ್ ಠಾಣೆಯ ಸಿಪಿಐ ಶ್ರೀಧರ್ ನೇತೃತ್ವದ ತಂಡ ಈ ಭಾಗದಲ್ಲಿ ನಡೆದ ಗುಡ್ಡ ಕುಸಿತದ ಹಿನ್ನೆಲೆಯಲ್ಲೇ ಗಸ್ತು ತಿರುಗುತ್ತಾ ಈ ಅಪರೂಪದ ಪರಿಸ್ಥಿತಿಯನ್ನು ಪತ್ತೆಹಚ್ಚಿದರು. ತಕ್ಷಣವೇ ಮಹಿಳೆ ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಅವರ ಇಚ್ಛೆಯಂತೆ, ಅವರನ್ನು ಬಂಕಿಕೊಡ್ಲದ ಯೋಗ ರತ್ನ ಸರಸ್ವತಿ ಸ್ವಾಮೀಜಿ ಅವರ ಆಶ್ರಮಕ್ಕೆ ಕರೆದೊಯ್ಯಲಾಯಿತು. ಸಮಾಲೋಚನೆಯ ವೇಳೆ ಮೋಹಿ ಹಿಂದೂ ಧರ್ಮದ ಆಧ್ಯಾತ್ಮ, ಧ್ಯಾನ ಹಾಗೂ ಪ್ರಕೃತಿ ಜೀವನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವುದು ತಿಳಿದುಬಂದಿದೆ. ಈ ಕಾರಣದಿಂದಲೇ ಅವರು ಸಾಮಾಜಿಕ ಜೀವನದಿಂದ ದೂರವಾಗಿ ಗುಹೆಯಲ್ಲಿ ವಾಸಿಸುತ್ತಿದ್ದರು.

ಈ ಅಪರೂಪದ ಮತ್ತು ಭದ್ರತೆಯ ಗಮನಸೆಳೆದ ಘಟನೆಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ತಿಳಿಸಿದ್ದಾರೆ. ಇದೀಗ ಮಹಿಳೆ ಹಾಗೂ ಮಕ್ಕಳನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ಬೆಂಗಳೂರಿಗೆ ಕಳಿಸಲಾಗಿದ್ದು, ರಷ್ಯಾ ರಾಯಭಾರ ಕಚೇರಿಯ ಸಹಕಾರದಿಂದ ಅವರನ್ನು ಅವರ ಸ್ವದೇಶಕ್ಕೆ ಹಿಂತಿರುಗಿಸಲು ಕ್ರಮ ಜರುಗಿಸಲಾಗುತ್ತಿದೆ.

nazeer ahamad

Recent Posts

ಜೋಯಿಡಾದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…

15 hours ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

3 days ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 week ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

3 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago