Latest

ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ ಮತ್ತು ಮಕ್ಕಳ ರಕ್ಷಣೆ.!: ಗೋಕರ್ಣದಲ್ಲಿ ಘಟನೆ

ಕುಮಟಾ, ಜುಲೈ 12 – ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥದ ದಟ್ಟ ಅರಣ್ಯ ಪ್ರದೇಶದಲ್ಲಿ ಎರಡು ಪುಟ್ಟ ಮಕ್ಕಳೊಂದಿಗೆ ಗುಹೆಯೊಂದರಲ್ಲಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆಯೊಬ್ಬರನ್ನು ಗೋಕರ್ಣ ಪೊಲೀಸರು ಪತ್ತೆಹಚ್ಚಿ ರಕ್ಷಿಸಿದ್ದಾರೆ. ಇದೀಗ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದೆ.

ಮೋಹಿ (40) ಎಂಬ ಈ ಮಹಿಳೆ, ತನ್ನ ಮಕ್ಕಳು ಪ್ರೆಯಾ (6) ಮತ್ತು ಅಮಾ (4)ರೊಂದಿಗೆ ಗುಹೆಯಲ್ಲೇ ವಾಸವಿದ್ದು, ದಿನಗಳನ್ನು ಧ್ಯಾನ, ಪೂಜಾ ಮತ್ತು ಪ್ರಾಕೃತಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದಳು. ಮೂಲತಃ ಬಿಸಿನೆಸ್ ವೀಸಾದಡಿ ರಷ್ಯಾದಿಂದ ಭಾರತಕ್ಕೆ ಬಂದಿದ್ದ ಈಕೆ, ಮೊದಲಿಗೆ ಗೋವಾಕ್ಕೆ ಆಗಮಿಸಿದ್ದು, ನಂತರ ಗೋಕರ್ಣದ ರಾಮತೀರ್ಥದ ಹತ್ತಿರದ ಒಂದು ಗುಹೆಯಲ್ಲಿ ನೆಲೆಸಿದ್ದರು.

ಸಂಪೂರ್ಣ ಆಂತರಿಕವಾದ ಜೀವನವೊಂದರೊಂದಿಗೆ ಈಕೆ ಗುಹೆಯಲ್ಲಿ ದಿನ ಕಳೆಯುತ್ತಿದ್ದ ಸಂದರ್ಭದಲ್ಲಿ, ಗೋಕರ್ಣ ಪೊಲೀಸ್ ಠಾಣೆಯ ಸಿಪಿಐ ಶ್ರೀಧರ್ ನೇತೃತ್ವದ ತಂಡ ಈ ಭಾಗದಲ್ಲಿ ನಡೆದ ಗುಡ್ಡ ಕುಸಿತದ ಹಿನ್ನೆಲೆಯಲ್ಲೇ ಗಸ್ತು ತಿರುಗುತ್ತಾ ಈ ಅಪರೂಪದ ಪರಿಸ್ಥಿತಿಯನ್ನು ಪತ್ತೆಹಚ್ಚಿದರು. ತಕ್ಷಣವೇ ಮಹಿಳೆ ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಅವರ ಇಚ್ಛೆಯಂತೆ, ಅವರನ್ನು ಬಂಕಿಕೊಡ್ಲದ ಯೋಗ ರತ್ನ ಸರಸ್ವತಿ ಸ್ವಾಮೀಜಿ ಅವರ ಆಶ್ರಮಕ್ಕೆ ಕರೆದೊಯ್ಯಲಾಯಿತು. ಸಮಾಲೋಚನೆಯ ವೇಳೆ ಮೋಹಿ ಹಿಂದೂ ಧರ್ಮದ ಆಧ್ಯಾತ್ಮ, ಧ್ಯಾನ ಹಾಗೂ ಪ್ರಕೃತಿ ಜೀವನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವುದು ತಿಳಿದುಬಂದಿದೆ. ಈ ಕಾರಣದಿಂದಲೇ ಅವರು ಸಾಮಾಜಿಕ ಜೀವನದಿಂದ ದೂರವಾಗಿ ಗುಹೆಯಲ್ಲಿ ವಾಸಿಸುತ್ತಿದ್ದರು.

ಈ ಅಪರೂಪದ ಮತ್ತು ಭದ್ರತೆಯ ಗಮನಸೆಳೆದ ಘಟನೆಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ತಿಳಿಸಿದ್ದಾರೆ. ಇದೀಗ ಮಹಿಳೆ ಹಾಗೂ ಮಕ್ಕಳನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ಬೆಂಗಳೂರಿಗೆ ಕಳಿಸಲಾಗಿದ್ದು, ರಷ್ಯಾ ರಾಯಭಾರ ಕಚೇರಿಯ ಸಹಕಾರದಿಂದ ಅವರನ್ನು ಅವರ ಸ್ವದೇಶಕ್ಕೆ ಹಿಂತಿರುಗಿಸಲು ಕ್ರಮ ಜರುಗಿಸಲಾಗುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago