ಕುಮಟಾ, ಜುಲೈ 12 – ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥದ ದಟ್ಟ ಅರಣ್ಯ ಪ್ರದೇಶದಲ್ಲಿ ಎರಡು ಪುಟ್ಟ ಮಕ್ಕಳೊಂದಿಗೆ ಗುಹೆಯೊಂದರಲ್ಲಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆಯೊಬ್ಬರನ್ನು ಗೋಕರ್ಣ ಪೊಲೀಸರು ಪತ್ತೆಹಚ್ಚಿ ರಕ್ಷಿಸಿದ್ದಾರೆ. ಇದೀಗ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದೆ.
ಮೋಹಿ (40) ಎಂಬ ಈ ಮಹಿಳೆ, ತನ್ನ ಮಕ್ಕಳು ಪ್ರೆಯಾ (6) ಮತ್ತು ಅಮಾ (4)ರೊಂದಿಗೆ ಗುಹೆಯಲ್ಲೇ ವಾಸವಿದ್ದು, ದಿನಗಳನ್ನು ಧ್ಯಾನ, ಪೂಜಾ ಮತ್ತು ಪ್ರಾಕೃತಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದಳು. ಮೂಲತಃ ಬಿಸಿನೆಸ್ ವೀಸಾದಡಿ ರಷ್ಯಾದಿಂದ ಭಾರತಕ್ಕೆ ಬಂದಿದ್ದ ಈಕೆ, ಮೊದಲಿಗೆ ಗೋವಾಕ್ಕೆ ಆಗಮಿಸಿದ್ದು, ನಂತರ ಗೋಕರ್ಣದ ರಾಮತೀರ್ಥದ ಹತ್ತಿರದ ಒಂದು ಗುಹೆಯಲ್ಲಿ ನೆಲೆಸಿದ್ದರು.
ಸಂಪೂರ್ಣ ಆಂತರಿಕವಾದ ಜೀವನವೊಂದರೊಂದಿಗೆ ಈಕೆ ಗುಹೆಯಲ್ಲಿ ದಿನ ಕಳೆಯುತ್ತಿದ್ದ ಸಂದರ್ಭದಲ್ಲಿ, ಗೋಕರ್ಣ ಪೊಲೀಸ್ ಠಾಣೆಯ ಸಿಪಿಐ ಶ್ರೀಧರ್ ನೇತೃತ್ವದ ತಂಡ ಈ ಭಾಗದಲ್ಲಿ ನಡೆದ ಗುಡ್ಡ ಕುಸಿತದ ಹಿನ್ನೆಲೆಯಲ್ಲೇ ಗಸ್ತು ತಿರುಗುತ್ತಾ ಈ ಅಪರೂಪದ ಪರಿಸ್ಥಿತಿಯನ್ನು ಪತ್ತೆಹಚ್ಚಿದರು. ತಕ್ಷಣವೇ ಮಹಿಳೆ ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಅವರ ಇಚ್ಛೆಯಂತೆ, ಅವರನ್ನು ಬಂಕಿಕೊಡ್ಲದ ಯೋಗ ರತ್ನ ಸರಸ್ವತಿ ಸ್ವಾಮೀಜಿ ಅವರ ಆಶ್ರಮಕ್ಕೆ ಕರೆದೊಯ್ಯಲಾಯಿತು. ಸಮಾಲೋಚನೆಯ ವೇಳೆ ಮೋಹಿ ಹಿಂದೂ ಧರ್ಮದ ಆಧ್ಯಾತ್ಮ, ಧ್ಯಾನ ಹಾಗೂ ಪ್ರಕೃತಿ ಜೀವನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವುದು ತಿಳಿದುಬಂದಿದೆ. ಈ ಕಾರಣದಿಂದಲೇ ಅವರು ಸಾಮಾಜಿಕ ಜೀವನದಿಂದ ದೂರವಾಗಿ ಗುಹೆಯಲ್ಲಿ ವಾಸಿಸುತ್ತಿದ್ದರು.
ಈ ಅಪರೂಪದ ಮತ್ತು ಭದ್ರತೆಯ ಗಮನಸೆಳೆದ ಘಟನೆಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ತಿಳಿಸಿದ್ದಾರೆ. ಇದೀಗ ಮಹಿಳೆ ಹಾಗೂ ಮಕ್ಕಳನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ಬೆಂಗಳೂರಿಗೆ ಕಳಿಸಲಾಗಿದ್ದು, ರಷ್ಯಾ ರಾಯಭಾರ ಕಚೇರಿಯ ಸಹಕಾರದಿಂದ ಅವರನ್ನು ಅವರ ಸ್ವದೇಶಕ್ಕೆ ಹಿಂತಿರುಗಿಸಲು ಕ್ರಮ ಜರುಗಿಸಲಾಗುತ್ತಿದೆ.
ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್ಸಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…
ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…