Latest

ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ ಮತ್ತು ಮಕ್ಕಳ ರಕ್ಷಣೆ.!: ಗೋಕರ್ಣದಲ್ಲಿ ಘಟನೆ

ಕುಮಟಾ, ಜುಲೈ 12 – ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥದ ದಟ್ಟ ಅರಣ್ಯ ಪ್ರದೇಶದಲ್ಲಿ ಎರಡು ಪುಟ್ಟ ಮಕ್ಕಳೊಂದಿಗೆ ಗುಹೆಯೊಂದರಲ್ಲಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆಯೊಬ್ಬರನ್ನು ಗೋಕರ್ಣ ಪೊಲೀಸರು ಪತ್ತೆಹಚ್ಚಿ ರಕ್ಷಿಸಿದ್ದಾರೆ. ಇದೀಗ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದೆ.

ಮೋಹಿ (40) ಎಂಬ ಈ ಮಹಿಳೆ, ತನ್ನ ಮಕ್ಕಳು ಪ್ರೆಯಾ (6) ಮತ್ತು ಅಮಾ (4)ರೊಂದಿಗೆ ಗುಹೆಯಲ್ಲೇ ವಾಸವಿದ್ದು, ದಿನಗಳನ್ನು ಧ್ಯಾನ, ಪೂಜಾ ಮತ್ತು ಪ್ರಾಕೃತಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದಳು. ಮೂಲತಃ ಬಿಸಿನೆಸ್ ವೀಸಾದಡಿ ರಷ್ಯಾದಿಂದ ಭಾರತಕ್ಕೆ ಬಂದಿದ್ದ ಈಕೆ, ಮೊದಲಿಗೆ ಗೋವಾಕ್ಕೆ ಆಗಮಿಸಿದ್ದು, ನಂತರ ಗೋಕರ್ಣದ ರಾಮತೀರ್ಥದ ಹತ್ತಿರದ ಒಂದು ಗುಹೆಯಲ್ಲಿ ನೆಲೆಸಿದ್ದರು.

ಸಂಪೂರ್ಣ ಆಂತರಿಕವಾದ ಜೀವನವೊಂದರೊಂದಿಗೆ ಈಕೆ ಗುಹೆಯಲ್ಲಿ ದಿನ ಕಳೆಯುತ್ತಿದ್ದ ಸಂದರ್ಭದಲ್ಲಿ, ಗೋಕರ್ಣ ಪೊಲೀಸ್ ಠಾಣೆಯ ಸಿಪಿಐ ಶ್ರೀಧರ್ ನೇತೃತ್ವದ ತಂಡ ಈ ಭಾಗದಲ್ಲಿ ನಡೆದ ಗುಡ್ಡ ಕುಸಿತದ ಹಿನ್ನೆಲೆಯಲ್ಲೇ ಗಸ್ತು ತಿರುಗುತ್ತಾ ಈ ಅಪರೂಪದ ಪರಿಸ್ಥಿತಿಯನ್ನು ಪತ್ತೆಹಚ್ಚಿದರು. ತಕ್ಷಣವೇ ಮಹಿಳೆ ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಅವರ ಇಚ್ಛೆಯಂತೆ, ಅವರನ್ನು ಬಂಕಿಕೊಡ್ಲದ ಯೋಗ ರತ್ನ ಸರಸ್ವತಿ ಸ್ವಾಮೀಜಿ ಅವರ ಆಶ್ರಮಕ್ಕೆ ಕರೆದೊಯ್ಯಲಾಯಿತು. ಸಮಾಲೋಚನೆಯ ವೇಳೆ ಮೋಹಿ ಹಿಂದೂ ಧರ್ಮದ ಆಧ್ಯಾತ್ಮ, ಧ್ಯಾನ ಹಾಗೂ ಪ್ರಕೃತಿ ಜೀವನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವುದು ತಿಳಿದುಬಂದಿದೆ. ಈ ಕಾರಣದಿಂದಲೇ ಅವರು ಸಾಮಾಜಿಕ ಜೀವನದಿಂದ ದೂರವಾಗಿ ಗುಹೆಯಲ್ಲಿ ವಾಸಿಸುತ್ತಿದ್ದರು.

ಈ ಅಪರೂಪದ ಮತ್ತು ಭದ್ರತೆಯ ಗಮನಸೆಳೆದ ಘಟನೆಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ತಿಳಿಸಿದ್ದಾರೆ. ಇದೀಗ ಮಹಿಳೆ ಹಾಗೂ ಮಕ್ಕಳನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ಬೆಂಗಳೂರಿಗೆ ಕಳಿಸಲಾಗಿದ್ದು, ರಷ್ಯಾ ರಾಯಭಾರ ಕಚೇರಿಯ ಸಹಕಾರದಿಂದ ಅವರನ್ನು ಅವರ ಸ್ವದೇಶಕ್ಕೆ ಹಿಂತಿರುಗಿಸಲು ಕ್ರಮ ಜರುಗಿಸಲಾಗುತ್ತಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

8 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

15 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

15 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago