Categories: CinemaLatest

ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್. ಜಾನಕಿ ಅಂತ್ಯಕ್ರಿಯೆ; ಮೊಮ್ಮಗಳು ಅಪ್ಸರಾ ನೆರವೇರಿಸಲಿದ್ದಾರೆ ಅಂತಿಮ ವಿಧಿವಿಧಾನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನಡೆಯಲಿದ್ದು, ಅವರ ಮೊಮ್ಮಗಳು ಅಪ್ಸರಾ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಎಸ್. ಜಾನಕಿ ಅವರ ಪುತ್ರ ಮುರುಳಿಕೃಷ್ಣ ಅವರು ಕೆಲವು ವರ್ಷಗಳ ಹಿಂದೆಯೇ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಪುತ್ರಿ ಅಪ್ಸರಾ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

ಕಣಿಯನಹುಂಡಿ ಗ್ರಾಮದಲ್ಲಿರುವ ಜಾನಕಿ ಅವರ ಅಭಿಮಾನಿ ನವೀನ್ ಅವರ ಫಾರಂ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಂತ್ಯಕ್ರಿಯೆಯ ಕುರಿತು ಕುಟುಂಬಸ್ಥರೊಂದಿಗೆ ಚರ್ಚಿಸಿದ ಬಳಿಕ ಶನಿವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಭಾನುವಾರ ಸಂಜೆ ಹೆಚ್.ಡಿ.ಕೋಟೆ ರಸ್ತೆಯ ಕಣಿಯನಹುಂಡಿ ತೋಟದಲ್ಲಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದರು.

ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಸಂಜೆ ಕಣಿಯನಹುಂಡಿಯ ನವೀನ್ ಅವರ ಫಾರಂ ಹೌಸ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು.

ತಮ್ಮ ಅಂತ್ಯಸಂಸ್ಕಾರ ಮೈಸೂರಿನಲ್ಲಿಯೇ ನಡೆಯಬೇಕು ಎಂಬುದು ಎಸ್. ಜಾನಕಿ ಅವರ ಇಚ್ಛೆಯಾಗಿತ್ತು. ಅವರ ಆಶಯದಂತೆ ಮೈಸೂರಿನಲ್ಲೇ ಅಂತಿಮ ಸಂಸ್ಕಾರ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

ಬಾಡಿಗೆ ಮನೆಯಲ್ಲಿ ವಾಸವಿದ್ದ ಜಾನಕಿ

ಮೈಸೂರಿನ ಬೊಗಾದಿಯ ಎಸ್‌ಬಿಎಂ ಬಡಾವಣೆಯ ಬಾಡಿಗೆ ಮನೆಯಲ್ಲಿ ಎಸ್. ಜಾನಕಿ ವಾಸವಿದ್ದರು. ನವೀನ್ ಮತ್ತು ಪವನ್ ಎಂಬವರು ಅವರನ್ನು ಆರೈಕೆ ಮಾಡುತ್ತಿದ್ದರು. ವಾರದ ಹಿಂದೆ ಮಂಗಳೂರಿನಲ್ಲಿರುವ ತಮ್ಮ ಅಕ್ಕನ ಮನೆಗೆ ತೆರಳಿ ವಾಪಸಾಗಿದ್ದರು. ಈ ವೇಳೆ ಅವರೊಂದಿಗೆ ಸೊಸೆ ಉಮಾ ಹಾಗೂ ಮೊಮ್ಮಗಳು ಅಪ್ಸರಾ ಇದ್ದರು.

ಶನಿವಾರ ಬೆಳಗ್ಗೆ ಸುಮಾರು 11 ಗಂಟೆಗೆ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 7.30ರ ಸುಮಾರಿಗೆ ಅವರು ನಿಧನರಾದರು. ಕಳೆದ ಎರಡು ವರ್ಷಗಳಿಂದ ಕೀಲು ನೋವು ಹಾಗೂ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

48 ಸಾವಿರಕ್ಕೂ ಅಧಿಕ ಹಾಡುಗಳ ಸರದಾರೆ

ಎಸ್. ಜಾನಕಿ ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಕೇವಲ ಹಿನ್ನೆಲೆ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರಸಂಗೀತ ಲೋಕದ ಅಪ್ರತಿಮ ಧ್ವನಿಯಾಗಿ ಕೋಟ್ಯಂತರ ಸಂಗೀತಪ್ರೇಮಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

ಕನ್ನಡದಲ್ಲಿ ಸಾವಿರಾರು ಸಾರ್ವಕಾಲಿಕ ಸೂಪರ್‌ಹಿಟ್ ಹಾಡುಗಳನ್ನು ಹಾಡಿರುವ ಎಸ್. ಜಾನಕಿ, ಭಾವಗೀತೆ, ಮೆಲೋಡಿ, ಶಾಸ್ತ್ರೀಯ, ಅರೆಶಾಸ್ತ್ರೀಯ, ರೊಮ್ಯಾಂಟಿಕ್ ಹಾಗೂ ಪಾಶ್ಚಾತ್ಯ ಶೈಲಿ ಸೇರಿದಂತೆ ಹಲವು ಪ್ರಕಾರದ ಹಾಡುಗಳಿಗೆ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಜೀವ ತುಂಬಿದ್ದರು.

ಎಸ್. ಜಾನಕಿ ಅವರು ಹಾಡುವುದನ್ನು ನಿಲ್ಲಿಸಿದ್ದರೂ ಅವರ ಹಾಡುಗಳು ಸಂಗೀತಪ್ರೇಮಿಗಳ ಹೃದಯದಲ್ಲಿ ಸದಾ ಜೀವಂತವಾಗಿರಲಿವೆ. ಇನ್ನು ಮುಂದೆ ಅವರ ಧ್ವನಿ, ಹಾಡುಗಳು ಮತ್ತು ಅಪಾರ ಸಂಗೀತ ಪರಂಪರೆಯೇ ಅವರ ಅಮರ ನೆನಪಾಗಿ ಉಳಿಯಲಿದೆ.

ಭ್ರಷ್ಟರ ಬೇಟೆ

Recent Posts

ಸಂತೆಗೆ ಹೋದ ವಿವಾಹಿತೆ ನಾಲ್ಕು ದಿನಗಳ ಬಳಿಕ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ; ಅನೈತಿಕ ಸಂಬಂಧದ ಶಂಕೆಯಲ್ಲಿ ಪ್ರಿಯಕರನ ವಿರುದ್ಧ ಆರೋಪ

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ವರ್ಚಗಲ್ ಗ್ರಾಮದ ಸಮೀಪದ ಕಬ್ಬಿನ ಗದ್ದೆಯಲ್ಲಿ 30 ವರ್ಷದ ವಿವಾಹಿತ ಮಹಿಳೆಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ…

4 hours ago

2026–27ನೇ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಆರಂಭ; ಆನ್‌ಲೈನ್ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು 2026–27ನೇ ಶೈಕ್ಷಣಿಕ ವರ್ಷಕ್ಕಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ…

4 hours ago

ಜಗಳೂರಿನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಬಯಲು; 403 ಚೀಲ ಅಕ್ಕಿ, ಕ್ಯಾಂಟರ್ ಲಾರಿ ಜಪ್ತಿ

ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಜಗಳೂರು ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ…

4 hours ago

ಗೋವಾ ಮದ್ಯ ಅಕ್ರಮ ಸಾಗಾಟ ಪ್ರಕರಣ: ಆರೋಪ ಸಾಬೀತು; ಪೊಲೀಸ್ ಸಿಬ್ಬಂದಿ ಸಂತೋಷ್ ಲಮಾಣಿ ಸೇವೆಯಿಂದ ವಜಾ

ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಸಿದ ಆರೋಪ ಇಲಾಖಾ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ…

4 hours ago

ಬೆಂಗಳೂರಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ಖಾಸಗಿ ಭಾಗ ತೋರಿಸಿದ ಡೆಲಿವರಿ ಬಾಯ್ ಬಂಧನ, ಫ್ಲಿಪ್‌ಕಾರ್ಟ್‌ನಿಂದ ಸೇವೆಯಿಂದ ವಜಾ

ಬೆಂಗಳೂರು: ನಗರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಪಾರ್ಸೆಲ್ ವಿತರಿಸಲು ಬಂದಿದ್ದ ಡೆಲಿವರಿ…

4 hours ago

ಎಬಿ–ಆರ್ಕೆ ಯೋಜನೆ ಅನುಷ್ಠಾನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ ಜಿಲ್ಲೆಗೆ ನಂ.1; ರಾಜ್ಯದಲ್ಲಿ 37ನೇ ಸ್ಥಾನ

ಭಟ್ಕಳ: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ (ಎಬಿ–ಆರ್ಕೆ) ಯೋಜನೆಯ 2026–27ನೇ ಸಾಲಿನ ರಾಜ್ಯಮಟ್ಟದ ಕಾರ್ಯಕ್ಷಮತೆ ಮೌಲ್ಯಮಾಪನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ ಗಮನಾರ್ಹ…

9 hours ago