ಬೆಂಗಳೂರು, ಜುಲೈ 30: ಹಿರಿಯ ನಟ ಹಾಗೂ ನಿರ್ದೇಶಕ ಎಸ್. ನಾರಾಯಣ ಅವರು ತಮ್ಮ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆ ಸೃಷ್ಟಿಸಿ, ಚಿತ್ರರಂಗದ ಪ್ರಮುಖ ನಟರ ಬಗ್ಗೆ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಎಸ್. ನಾರಾಯಣ, “ನನ್ನ ಹೆಸರಿನಲ್ಲಿ ನಕಲಿ ಅಕೌಂಟ್ ತೆರಳಿ, ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ಸುದೀಪ್ ಸೇರಿದಂತೆ ಕನ್ನಡದ ಸ್ಟಾರ್ ನಟರ ವಿರುದ್ಧ ಅವಮಾನಕಾರಿಯಾಗಿ ಪೋಸ್ಟ್ಗಳನ್ನು ಹಾಕಲಾಗಿದೆ. ಈ ಖಾತೆಯನ್ನು ನಾನು ಅಥವಾ ನನ್ನ ತಂಡ ನಿರ್ವಹಿಸುತ್ತಿಲ್ಲ. ಸ್ನೇಹಿತರು ಈ ಬಗ್ಗೆ ನನಗೆ ಮಾಹಿತಿ ನೀಡಿದಾಗಷ್ಟೆ ವಿಷಯ ಅರಿವಿಗೆ ಬಂತು. ಸುಮಾರು ಐದು-ಆರು ತಿಂಗಳಿಂದ ಈ ಅಕ್ರಮ ನಡೆಯುತ್ತಿತ್ತು, ಆದರೆ ನನಗೆ ಕೆಲವೇ ದಿನಗಳ ಹಿಂದೆ ತಿಳಿಯಿತು. ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದೇನೆ,” ಎಂದರು.
ನಕಲಿ ಖಾತೆಗಳಿಂದ ನಡೆಯುತ್ತಿರುವ ಈ ರೀತಿಯ ಹೀನ ಕಾರ್ಯಚಟುವಟಿಕೆಗಳು ಸಮಾಜದಲ್ಲಿ ದ್ವೇಷ ಮತ್ತು ಭ್ರಾಂತಿ ಸೃಷ್ಟಿಸುತ್ತವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. “ಸೋಶಿಯಲ್ ಮೀಡಿಯಾದ ದುರ್ಬಳಕೆ ನಿರಂತರವಾಗಿ ಹೆಚ್ಚುತ್ತಿದೆ. ಇದು ನೊಂದ ಸಮಾಜಕ್ಕೆ ಅವಮಾನವಾಗುತ್ತಿದೆ. ವ್ಯಕ್ತಿಯ ಗೌರವದ ಮಿತಿಯನ್ನು ಮೀರದಂತೆ ಎಲ್ಲರೂ ಜಾಗರೂಕರಾಗಬೇಕು. ನಮ್ಮೆಲ್ಲರ ನಡುವಿನ ಬಾಂಧವ್ಯವನ್ನು ಇಂಥ ಆರೋಪಗಳಿಂದ ಹಾಳು ಮಾಡುವ ಕೆಲಸ ಮಾಡಬಾರದು,” ಎಂದು ಅವರು ಹೇಳಿದರು.
ಎಸ್. ನಾರಾಯಣ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾ, “ನಾನು ಯಾವುದೇ ಕಲಾವಿದರ ಅಭಿಮಾನಿಗಳ ವಿರುದ್ಧ ಇಲ್ಲ. ಅವರಿಂದ ನೇರವಾಗಿ ಯಾವುದೇ ಧಂಗು ಬಂದಿಲ್ಲ. ಆದರೆ ಈ ನಕಲಿ ಅಕೌಂಟ್ನ ಹಿಂದಿರುವ ವ್ಯಕ್ತಿಯನ್ನು ಹಿಡಿದು ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.
ಅಂತೆಯೇ ಚಿತ್ರರಂಗದ ವ್ಯಾಪಾರ ಮಂಡಳಿಗಳು ಹಾಗೂ ಸಂಗಡಿಗರು ಈ ಸಂಬಂಧ ಸ್ಪಷ್ಟ ನಿಲುವು ತಾಳಬೇಕೆಂದು ಅವರು ಸೂಚಿಸಿದರು. “ಇದು ಕೇವಲ ವೈಯಕ್ತಿಕ ಸಮಸ್ಯೆಯಲ್ಲ. ಇಡೀ ಕನ್ನಡ ಚಿತ್ರರಂಗದ ಗೌರವಕ್ಕೆ ಧಕ್ಕೆ ಉಂಟುಮಾಡುವ ಕೆಲಸವಾಗಿದೆ. ಅದಕ್ಕಾಗಿ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು,” ಎಂದು ನಾರಾಯಣ ಹೇಳಿದರು.
ಈ ದೂರು ಆಧರಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ನಕಲಿ ಖಾತೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗ ಚುರುಕು ಕಾರ್ಯಚರಣೆಗೆ ಮುಂದಾಗಿದೆ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…