ಬೆಂಗಳೂರು, ಜುಲೈ 30: ಹಿರಿಯ ನಟ ಹಾಗೂ ನಿರ್ದೇಶಕ ಎಸ್. ನಾರಾಯಣ ಅವರು ತಮ್ಮ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆ ಸೃಷ್ಟಿಸಿ, ಚಿತ್ರರಂಗದ ಪ್ರಮುಖ ನಟರ ಬಗ್ಗೆ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಎಸ್. ನಾರಾಯಣ, “ನನ್ನ ಹೆಸರಿನಲ್ಲಿ ನಕಲಿ ಅಕೌಂಟ್ ತೆರಳಿ, ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ಸುದೀಪ್ ಸೇರಿದಂತೆ ಕನ್ನಡದ ಸ್ಟಾರ್ ನಟರ ವಿರುದ್ಧ ಅವಮಾನಕಾರಿಯಾಗಿ ಪೋಸ್ಟ್ಗಳನ್ನು ಹಾಕಲಾಗಿದೆ. ಈ ಖಾತೆಯನ್ನು ನಾನು ಅಥವಾ ನನ್ನ ತಂಡ ನಿರ್ವಹಿಸುತ್ತಿಲ್ಲ. ಸ್ನೇಹಿತರು ಈ ಬಗ್ಗೆ ನನಗೆ ಮಾಹಿತಿ ನೀಡಿದಾಗಷ್ಟೆ ವಿಷಯ ಅರಿವಿಗೆ ಬಂತು. ಸುಮಾರು ಐದು-ಆರು ತಿಂಗಳಿಂದ ಈ ಅಕ್ರಮ ನಡೆಯುತ್ತಿತ್ತು, ಆದರೆ ನನಗೆ ಕೆಲವೇ ದಿನಗಳ ಹಿಂದೆ ತಿಳಿಯಿತು. ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದೇನೆ,” ಎಂದರು.
ನಕಲಿ ಖಾತೆಗಳಿಂದ ನಡೆಯುತ್ತಿರುವ ಈ ರೀತಿಯ ಹೀನ ಕಾರ್ಯಚಟುವಟಿಕೆಗಳು ಸಮಾಜದಲ್ಲಿ ದ್ವೇಷ ಮತ್ತು ಭ್ರಾಂತಿ ಸೃಷ್ಟಿಸುತ್ತವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. “ಸೋಶಿಯಲ್ ಮೀಡಿಯಾದ ದುರ್ಬಳಕೆ ನಿರಂತರವಾಗಿ ಹೆಚ್ಚುತ್ತಿದೆ. ಇದು ನೊಂದ ಸಮಾಜಕ್ಕೆ ಅವಮಾನವಾಗುತ್ತಿದೆ. ವ್ಯಕ್ತಿಯ ಗೌರವದ ಮಿತಿಯನ್ನು ಮೀರದಂತೆ ಎಲ್ಲರೂ ಜಾಗರೂಕರಾಗಬೇಕು. ನಮ್ಮೆಲ್ಲರ ನಡುವಿನ ಬಾಂಧವ್ಯವನ್ನು ಇಂಥ ಆರೋಪಗಳಿಂದ ಹಾಳು ಮಾಡುವ ಕೆಲಸ ಮಾಡಬಾರದು,” ಎಂದು ಅವರು ಹೇಳಿದರು.
ಎಸ್. ನಾರಾಯಣ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾ, “ನಾನು ಯಾವುದೇ ಕಲಾವಿದರ ಅಭಿಮಾನಿಗಳ ವಿರುದ್ಧ ಇಲ್ಲ. ಅವರಿಂದ ನೇರವಾಗಿ ಯಾವುದೇ ಧಂಗು ಬಂದಿಲ್ಲ. ಆದರೆ ಈ ನಕಲಿ ಅಕೌಂಟ್ನ ಹಿಂದಿರುವ ವ್ಯಕ್ತಿಯನ್ನು ಹಿಡಿದು ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.
ಅಂತೆಯೇ ಚಿತ್ರರಂಗದ ವ್ಯಾಪಾರ ಮಂಡಳಿಗಳು ಹಾಗೂ ಸಂಗಡಿಗರು ಈ ಸಂಬಂಧ ಸ್ಪಷ್ಟ ನಿಲುವು ತಾಳಬೇಕೆಂದು ಅವರು ಸೂಚಿಸಿದರು. “ಇದು ಕೇವಲ ವೈಯಕ್ತಿಕ ಸಮಸ್ಯೆಯಲ್ಲ. ಇಡೀ ಕನ್ನಡ ಚಿತ್ರರಂಗದ ಗೌರವಕ್ಕೆ ಧಕ್ಕೆ ಉಂಟುಮಾಡುವ ಕೆಲಸವಾಗಿದೆ. ಅದಕ್ಕಾಗಿ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು,” ಎಂದು ನಾರಾಯಣ ಹೇಳಿದರು.
ಈ ದೂರು ಆಧರಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ನಕಲಿ ಖಾತೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗ ಚುರುಕು ಕಾರ್ಯಚರಣೆಗೆ ಮುಂದಾಗಿದೆ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…