ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ ವ್ಯಾಪಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಎಂಬುವವರು ತಮ್ಮ ಮಾವಿನ ತೋಟಕ್ಕೆ ಭೇಟಿ ನೀಡಿದ್ದ ಸಂದರ್ಭ ಈ ಘಟನೆ ನಡೆದಿದೆ. ಅನ್ವರ್ ಅವರು ಸುಮಾರು 30 ಲಕ್ಷ ರೂಪಾಯಿ ಮೊತ್ತದ ಮಾವು ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಆದರೆ ಈ ವರ್ಷ ಮಾವಿನ ಬೆಲೆಗಳು ತೀವ್ರವಾಗಿ ಕುಸಿತಗೊಂಡಿರುವ ಹಿನ್ನೆಲೆ ಆರ್ಥಿಕ ತೊಂದರೆಗೆ ಅವರು ಒಳಗಾಗಿದ್ದರು.
ಮೌಲ್ಯ ಕುಸಿತದಿಂದಾಗಿ ಅನ್ವರ್ ತಮ್ಮ ತೋಟದಲ್ಲಿ ಸಿಂಪಡಿಸಿದ ಔಷಧಗಳ ವೆಚ್ಚವನ್ನೂ ಪೂರೈಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದರು. ಇಂದು ಬೆಳಗ್ಗೆ ಅವರು ತೋಟದಲ್ಲಿ ಮಾವು ಕಟಾವು ಕೆಲಸಗಳನ್ನಾಗಿಟ್ಟಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು.
ಈ ಮಧ್ಯೆ, ಮೌಲ್ಯ ಭದ್ರತಾ ಬೆಲೆ (ಬೆಂಬಲ ಬೆಲೆ) ಕೊಡಿಸುವಂತೆ ರೈತರು ಕಳೆದ 18 ದಿನಗಳಿಂದ ಹೋರಾಟ ನಡೆಸುತ್ತಿರುವುದು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. ಅನ್ವರ್ ಅವರ ಕುಟುಂಬಸ್ಥರು ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…