ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ ವ್ಯಾಪಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಎಂಬುವವರು ತಮ್ಮ ಮಾವಿನ ತೋಟಕ್ಕೆ ಭೇಟಿ ನೀಡಿದ್ದ ಸಂದರ್ಭ ಈ ಘಟನೆ ನಡೆದಿದೆ. ಅನ್ವರ್ ಅವರು ಸುಮಾರು 30 ಲಕ್ಷ ರೂಪಾಯಿ ಮೊತ್ತದ ಮಾವು ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಆದರೆ ಈ ವರ್ಷ ಮಾವಿನ ಬೆಲೆಗಳು ತೀವ್ರವಾಗಿ ಕುಸಿತಗೊಂಡಿರುವ ಹಿನ್ನೆಲೆ ಆರ್ಥಿಕ ತೊಂದರೆಗೆ ಅವರು ಒಳಗಾಗಿದ್ದರು.
ಮೌಲ್ಯ ಕುಸಿತದಿಂದಾಗಿ ಅನ್ವರ್ ತಮ್ಮ ತೋಟದಲ್ಲಿ ಸಿಂಪಡಿಸಿದ ಔಷಧಗಳ ವೆಚ್ಚವನ್ನೂ ಪೂರೈಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದರು. ಇಂದು ಬೆಳಗ್ಗೆ ಅವರು ತೋಟದಲ್ಲಿ ಮಾವು ಕಟಾವು ಕೆಲಸಗಳನ್ನಾಗಿಟ್ಟಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು.
ಈ ಮಧ್ಯೆ, ಮೌಲ್ಯ ಭದ್ರತಾ ಬೆಲೆ (ಬೆಂಬಲ ಬೆಲೆ) ಕೊಡಿಸುವಂತೆ ರೈತರು ಕಳೆದ 18 ದಿನಗಳಿಂದ ಹೋರಾಟ ನಡೆಸುತ್ತಿರುವುದು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. ಅನ್ವರ್ ಅವರ ಕುಟುಂಬಸ್ಥರು ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…