Latest

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ ವ್ಯಾಪಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಎಂಬುವವರು ತಮ್ಮ ಮಾವಿನ ತೋಟಕ್ಕೆ ಭೇಟಿ ನೀಡಿದ್ದ ಸಂದರ್ಭ ಈ ಘಟನೆ ನಡೆದಿದೆ. ಅನ್ವರ್ ಅವರು ಸುಮಾರು 30 ಲಕ್ಷ ರೂಪಾಯಿ ಮೊತ್ತದ ಮಾವು ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಆದರೆ ಈ ವರ್ಷ ಮಾವಿನ ಬೆಲೆಗಳು ತೀವ್ರವಾಗಿ ಕುಸಿತಗೊಂಡಿರುವ ಹಿನ್ನೆಲೆ ಆರ್ಥಿಕ ತೊಂದರೆಗೆ ಅವರು ಒಳಗಾಗಿದ್ದರು.

ಮೌಲ್ಯ ಕುಸಿತದಿಂದಾಗಿ ಅನ್ವರ್ ತಮ್ಮ ತೋಟದಲ್ಲಿ ಸಿಂಪಡಿಸಿದ ಔಷಧಗಳ ವೆಚ್ಚವನ್ನೂ ಪೂರೈಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದರು. ಇಂದು ಬೆಳಗ್ಗೆ ಅವರು ತೋಟದಲ್ಲಿ ಮಾವು ಕಟಾವು ಕೆಲಸಗಳನ್ನಾಗಿಟ್ಟಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು.

ಈ ಮಧ್ಯೆ, ಮೌಲ್ಯ ಭದ್ರತಾ ಬೆಲೆ (ಬೆಂಬಲ ಬೆಲೆ) ಕೊಡಿಸುವಂತೆ ರೈತರು ಕಳೆದ 18 ದಿನಗಳಿಂದ ಹೋರಾಟ ನಡೆಸುತ್ತಿರುವುದು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. ಅನ್ವರ್ ಅವರ ಕುಟುಂಬಸ್ಥರು ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago