ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ ವ್ಯಾಪಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಎಂಬುವವರು ತಮ್ಮ ಮಾವಿನ ತೋಟಕ್ಕೆ ಭೇಟಿ ನೀಡಿದ್ದ ಸಂದರ್ಭ ಈ ಘಟನೆ ನಡೆದಿದೆ. ಅನ್ವರ್ ಅವರು ಸುಮಾರು 30 ಲಕ್ಷ ರೂಪಾಯಿ ಮೊತ್ತದ ಮಾವು ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಆದರೆ ಈ ವರ್ಷ ಮಾವಿನ ಬೆಲೆಗಳು ತೀವ್ರವಾಗಿ ಕುಸಿತಗೊಂಡಿರುವ ಹಿನ್ನೆಲೆ ಆರ್ಥಿಕ ತೊಂದರೆಗೆ ಅವರು ಒಳಗಾಗಿದ್ದರು.
ಮೌಲ್ಯ ಕುಸಿತದಿಂದಾಗಿ ಅನ್ವರ್ ತಮ್ಮ ತೋಟದಲ್ಲಿ ಸಿಂಪಡಿಸಿದ ಔಷಧಗಳ ವೆಚ್ಚವನ್ನೂ ಪೂರೈಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದರು. ಇಂದು ಬೆಳಗ್ಗೆ ಅವರು ತೋಟದಲ್ಲಿ ಮಾವು ಕಟಾವು ಕೆಲಸಗಳನ್ನಾಗಿಟ್ಟಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು.
ಈ ಮಧ್ಯೆ, ಮೌಲ್ಯ ಭದ್ರತಾ ಬೆಲೆ (ಬೆಂಬಲ ಬೆಲೆ) ಕೊಡಿಸುವಂತೆ ರೈತರು ಕಳೆದ 18 ದಿನಗಳಿಂದ ಹೋರಾಟ ನಡೆಸುತ್ತಿರುವುದು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. ಅನ್ವರ್ ಅವರ ಕುಟುಂಬಸ್ಥರು ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…