Latest

ಅವ್ಯವಸ್ತೆಯಿಂದ ಕೂಡಿದ ಹುಬ್ಬಳ್ಳಿಯ ಸಾಯಿನಗರ್ ಉಣಕಲ್.

ಕರ್ನಾಟಕ ರಾಜ್ಯದಲ್ಲಿ ಹುಬ್ಬಳ್ಳಿ ( ಛೋಟಾ ಮುಂಬೈ ) ವಾಣಿಜ್ಯ ನಗರ ಎಂದರೇ ಯಾರಿಗೇ ಗೊತ್ತಿಲ್ಲ ಅನ್ನೋ ಮಾತಿಲ್ಲ. ಎಲ್ಲರಿಗೂ ಪರಿಚಿತ ಸ್ಥಳ ಈ ಹುಬ್ಬಳ್ಳಿ. ಇತ್ತೀಚಿನ ದಿನಗಳಲ್ಲಿ ಈ ಹುಬ್ಬಳ್ಳಿ ” ಸ್ಮಾರ್ಟ್ ಸಿಟಿ” ಎಂದೂ ಹೆಸರು ಗಳಿಸಿದೆ ಅದೂ ಹೆಸರಿಗೆ ಅಷ್ಟೇ ಎನ್ನುವ ಸ್ಥಿತಿ ಬರುತ್ತಿದೆ ಏಕೆಂದರೆ ಹುಬ್ಬಳ್ಳಿ ನಗರ ಪ್ರದೇಶದಲ್ಲಿ ಬರುವ ಸಾಯಿನಗರ ರಸ್ತೆ ಮತ್ತು ನಿವಾಸಿಗಳ ಕೊರತೆಗಳನ್ನು ಯಾರೂ ಕಣ್ತೆರೆದು ನೋಡುತ್ತಿಲ್ಲ.

ಇಲ್ಲಿ ರಾಜಕೀಯ ಗಣ್ಯೇರು ಇದ್ದೂ ಇಲ್ಲದಂತಾಗಿದೆ ಸಂಬಂಧ ಪಟ್ಟ ಅಧಿಕಾರಿಗಳು ಇದ್ದುಯಿಲ್ಲದಂತಾಗಿದೆ ಈ ಪರಿಸ್ಥಿತಿ ಯಾರಿಂದ ಯಾವಾಗ ಹೇಗೆ ಸರಿಯಾಗುತ್ತೋ ಎಂಬುದು ತಿಳಿಯದಂತಾಗಿದೆ ಸಾಯಿನಗರ್ ಕ್ರಾಸ್ ದಿಂದ ಮುಖ್ಯ ರಸ್ತೆಯ ಮೂಲಕ ಸಾಯಿನಗರ್ ಲಾಸ್ಟ್ ಸ್ಟಾಪ್ ಉಣಕಲ್ ಚರ್ಚ್ ವರೆಗೂ ಇರುವ ರಸ್ತೆಯನ್ನೊಮ್ಮೆ ನೋಡಿದರೆ ಯಾಕಾದರೂ ಈ ರಸ್ತೆಗೆ ಬರುತ್ತೇವೆಯೋ ಎಂಬ ಬೇಸರ ಉಂಟಾಗುತ್ತಿದೆ.

ಸಾಯಿನಗರ್ ಕ್ರಾಸ್ ದಿಂದ ಸಾಯಿನಗರ್ ಲಾಸ್ಟ್ ಸ್ಟಾಪ್ ವರೆಗೂ ಬರಬೇಕೆಂದರೆ ರಸ್ತೆಯ ಎಲ್ಲೆಂದರಲ್ಲಿ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ಭಾಗದಲ್ಲಿ ರಸ್ತೆ ಹದಗೆಟ್ಟು ಹೋಗಿದೆ ಅಪಘಾತಕ್ಕೆ ಕಾಯುತ್ತಿವೆ ವಾಹನ ಸವಾರರಿಗೇ ತುಂಬಾ ಕಿರಿಕಿರಿ ಆಗುತ್ತಿದೆ ಅಷ್ಟೇ ಅಲ್ಲದೆ ಈ ಸಾಯಿನಗರ್ ಮುಖ್ಯ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಹುಬ್ಬಳ್ಳಿ ಸಿಟಿ ಬಸ್ ನಿಲ್ದಾಣದಿಂದ ಕೆ ಎಸ್ ಆರ್ ಟಿ ಸಿ ಸಂಚಾರಿ ವಾಹನಗಳು ಓಡಾಡುತ್ತವೆ. ದಿನನಿತ್ಯ ಸಾವಿರಾರು ಜನ ಇದೇ ರಸ್ತೆಯ ಮೂಲಕ ಕೆಲಸಕ್ಕೆ ನಗರ ಪ್ರದೇಶಕ್ಕೆ ಓಡಾಡುತ್ತಾರೆ ವೃದ್ಧರು ವಿದ್ಯಾರ್ಥಿಗಳೂ ಈ ರಸ್ತೆಯಲ್ಲಿ ಓಡಾಡಲು ಭಯಪಡುವ ಸ್ಥಿತಿ ಉಂಟಾಗುತ್ತಿದೆ ಮುಖ್ಯ ರಸ್ತೆಯ ಅಕ್ಕ ಪಕ್ಕದಲ್ಲಿ ಸರಿಯಾದ ಸ್ವಚ್ಚತೆ ಇರುವುದಿಲ್ಲ ಸರಿಯಾದ ಚರಂಡಿ ವ್ಯವಸ್ಥೆಯೂ ಇರುವುದಿಲ್ಲ ರಸ್ತೆಯ ಅರ್ಧದಷ್ಟು ಕಳಚಿ ಹೋಗಿ ತಿಪ್ಪಿಗುಂಡಿಯಿಂದ ಕೂಡಿದೆ ಮಳೆಗಾಲದಲ್ಲಿ ದೇವರೇ ಗತಿ ಎಂಬಂತಾದರೂ ಕೂಡಾ ಯಾವ ಅಧಿಕಾರಿಗಳೂ ಗಮನ ಹರಿಸದೆ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ ಸ್ಥಳಿಯ ನಿವಾಸಿಗಳು ಇಂತಹ ಸಮಸ್ಯೆಗಳನ್ನೂ ಎದುರಿಸುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ನಿಜಕ್ಕೂ ವಿಪರ್ಯಾಸ.
ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸಾಯಿನಗರ್ ಮತ್ತು ಉಣಕಲ್ ಭಾಗದ ನಿವಾಸಿಗಳಿಗೆ ಆಗುತ್ತಿರುವ ಅವ್ಯವಸ್ತೆಯನ್ನು ಪರಿಶೀಲಿಸಿ ಸರಿಯಾದ ಸ್ವಚ್ಛತೆ ಮತ್ತು ವ್ಯವಸ್ತೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

2 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

2 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

2 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

2 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

7 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

7 hours ago