Latest

ಅವ್ಯವಸ್ತೆಯಿಂದ ಕೂಡಿದ ಹುಬ್ಬಳ್ಳಿಯ ಸಾಯಿನಗರ್ ಉಣಕಲ್.

ಕರ್ನಾಟಕ ರಾಜ್ಯದಲ್ಲಿ ಹುಬ್ಬಳ್ಳಿ ( ಛೋಟಾ ಮುಂಬೈ ) ವಾಣಿಜ್ಯ ನಗರ ಎಂದರೇ ಯಾರಿಗೇ ಗೊತ್ತಿಲ್ಲ ಅನ್ನೋ ಮಾತಿಲ್ಲ. ಎಲ್ಲರಿಗೂ ಪರಿಚಿತ ಸ್ಥಳ ಈ ಹುಬ್ಬಳ್ಳಿ. ಇತ್ತೀಚಿನ ದಿನಗಳಲ್ಲಿ ಈ ಹುಬ್ಬಳ್ಳಿ ” ಸ್ಮಾರ್ಟ್ ಸಿಟಿ” ಎಂದೂ ಹೆಸರು ಗಳಿಸಿದೆ ಅದೂ ಹೆಸರಿಗೆ ಅಷ್ಟೇ ಎನ್ನುವ ಸ್ಥಿತಿ ಬರುತ್ತಿದೆ ಏಕೆಂದರೆ ಹುಬ್ಬಳ್ಳಿ ನಗರ ಪ್ರದೇಶದಲ್ಲಿ ಬರುವ ಸಾಯಿನಗರ ರಸ್ತೆ ಮತ್ತು ನಿವಾಸಿಗಳ ಕೊರತೆಗಳನ್ನು ಯಾರೂ ಕಣ್ತೆರೆದು ನೋಡುತ್ತಿಲ್ಲ.

ಇಲ್ಲಿ ರಾಜಕೀಯ ಗಣ್ಯೇರು ಇದ್ದೂ ಇಲ್ಲದಂತಾಗಿದೆ ಸಂಬಂಧ ಪಟ್ಟ ಅಧಿಕಾರಿಗಳು ಇದ್ದುಯಿಲ್ಲದಂತಾಗಿದೆ ಈ ಪರಿಸ್ಥಿತಿ ಯಾರಿಂದ ಯಾವಾಗ ಹೇಗೆ ಸರಿಯಾಗುತ್ತೋ ಎಂಬುದು ತಿಳಿಯದಂತಾಗಿದೆ ಸಾಯಿನಗರ್ ಕ್ರಾಸ್ ದಿಂದ ಮುಖ್ಯ ರಸ್ತೆಯ ಮೂಲಕ ಸಾಯಿನಗರ್ ಲಾಸ್ಟ್ ಸ್ಟಾಪ್ ಉಣಕಲ್ ಚರ್ಚ್ ವರೆಗೂ ಇರುವ ರಸ್ತೆಯನ್ನೊಮ್ಮೆ ನೋಡಿದರೆ ಯಾಕಾದರೂ ಈ ರಸ್ತೆಗೆ ಬರುತ್ತೇವೆಯೋ ಎಂಬ ಬೇಸರ ಉಂಟಾಗುತ್ತಿದೆ.

ಸಾಯಿನಗರ್ ಕ್ರಾಸ್ ದಿಂದ ಸಾಯಿನಗರ್ ಲಾಸ್ಟ್ ಸ್ಟಾಪ್ ವರೆಗೂ ಬರಬೇಕೆಂದರೆ ರಸ್ತೆಯ ಎಲ್ಲೆಂದರಲ್ಲಿ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ಭಾಗದಲ್ಲಿ ರಸ್ತೆ ಹದಗೆಟ್ಟು ಹೋಗಿದೆ ಅಪಘಾತಕ್ಕೆ ಕಾಯುತ್ತಿವೆ ವಾಹನ ಸವಾರರಿಗೇ ತುಂಬಾ ಕಿರಿಕಿರಿ ಆಗುತ್ತಿದೆ ಅಷ್ಟೇ ಅಲ್ಲದೆ ಈ ಸಾಯಿನಗರ್ ಮುಖ್ಯ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಹುಬ್ಬಳ್ಳಿ ಸಿಟಿ ಬಸ್ ನಿಲ್ದಾಣದಿಂದ ಕೆ ಎಸ್ ಆರ್ ಟಿ ಸಿ ಸಂಚಾರಿ ವಾಹನಗಳು ಓಡಾಡುತ್ತವೆ. ದಿನನಿತ್ಯ ಸಾವಿರಾರು ಜನ ಇದೇ ರಸ್ತೆಯ ಮೂಲಕ ಕೆಲಸಕ್ಕೆ ನಗರ ಪ್ರದೇಶಕ್ಕೆ ಓಡಾಡುತ್ತಾರೆ ವೃದ್ಧರು ವಿದ್ಯಾರ್ಥಿಗಳೂ ಈ ರಸ್ತೆಯಲ್ಲಿ ಓಡಾಡಲು ಭಯಪಡುವ ಸ್ಥಿತಿ ಉಂಟಾಗುತ್ತಿದೆ ಮುಖ್ಯ ರಸ್ತೆಯ ಅಕ್ಕ ಪಕ್ಕದಲ್ಲಿ ಸರಿಯಾದ ಸ್ವಚ್ಚತೆ ಇರುವುದಿಲ್ಲ ಸರಿಯಾದ ಚರಂಡಿ ವ್ಯವಸ್ಥೆಯೂ ಇರುವುದಿಲ್ಲ ರಸ್ತೆಯ ಅರ್ಧದಷ್ಟು ಕಳಚಿ ಹೋಗಿ ತಿಪ್ಪಿಗುಂಡಿಯಿಂದ ಕೂಡಿದೆ ಮಳೆಗಾಲದಲ್ಲಿ ದೇವರೇ ಗತಿ ಎಂಬಂತಾದರೂ ಕೂಡಾ ಯಾವ ಅಧಿಕಾರಿಗಳೂ ಗಮನ ಹರಿಸದೆ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ ಸ್ಥಳಿಯ ನಿವಾಸಿಗಳು ಇಂತಹ ಸಮಸ್ಯೆಗಳನ್ನೂ ಎದುರಿಸುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ನಿಜಕ್ಕೂ ವಿಪರ್ಯಾಸ.
ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸಾಯಿನಗರ್ ಮತ್ತು ಉಣಕಲ್ ಭಾಗದ ನಿವಾಸಿಗಳಿಗೆ ಆಗುತ್ತಿರುವ ಅವ್ಯವಸ್ತೆಯನ್ನು ಪರಿಶೀಲಿಸಿ ಸರಿಯಾದ ಸ್ವಚ್ಛತೆ ಮತ್ತು ವ್ಯವಸ್ತೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago