Latest

ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ: ಪರವಾನಿಗೆ ಪಡೆಯಲು ರೈತರಲ್ಲಿ ಡಿ.ಸಿ. ಮನವಿ

ಕಲಬುರಗಿ-ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಒಂದು ಸಕ್ಕರೆ ಕಾರ್ಖಾನೆ ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಬಯಸಿದ್ದಲ್ಲಿ ಕರ್ನಾಟಕ ಶುಗರಕೇನ್ (ರೆಗ್ಯೂಲೇಷನ್ ಮತು ಡಿಸ್ಟ್ರಿಬೂಷನ್) ಕಾಯ್ದೆಯ ಶೆಡ್ಯೂಲ್-2 ಪ್ರಕಾರ ನಿಗಧಿತ ನಮೂನೆ-2ರಲ್ಲಿ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡಿ ಅದರೊಂದಿಗೆ 100 ರೂ. ಸೆಲ್ಫ್ ಚೆಕ್ ಮತ್ತು ನಿಗದಿತ ಶುಲ್ಕ 5 ರೂ. ಗಳನ್ನು ಕೆ2 ಚಲನ್ ಮೂಲಕ ಲೆಕ್ಕ ಶೀರ್ಷಿಕೆ 0070-60-800-3-04-000 ಗೆ ಸಂದಾಯ ಮಾಡಿ ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯಲ್ಲಿ ಸ್ಥಾಪಿಸಲಾಗಿರುವ ಕೌಂಟರನಲ್ಲಿ ಅರ್ಜಿ ಸಲ್ಲಿಸಿದಲ್ಲಿ ನಮೂನೆ-1ರಲ್ಲಿ ಕಬ್ಬು ರಫ್ತಿಗೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಜಿಲ್ಲೆಯ ಚಿಣಮಗೇರಾದ ಕೆ.ಪಿ.ಆರ್.ಶುಗರ್ ಕಂಪನಿಗೆ 16 ಗ್ರಾಮಗಳ 18 ಲಕ್ಷ ಕಬ್ಬು ಮತ್ತು ಎನ್.ಎಸ್.ಎಲ್ ಶುಗರ್ ಕಾರ್ಖಾನೆ ವ್ಯಾಪ್ತಿಯ 110 ಗ್ರಾಮಗಳ 13 ಲಕ್ಷ ಟನ್ ಕಬ್ಬು ಕಟಾವಿಗೆ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಈ ಬಾರಿ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 60 ಲಕ್ಷ ಟನ್ ಕಬ್ಬು ಬೆಳೆಯಲಾಗಿದೆ. ಪ್ರಸಕ್ತ 2022-23ನೇ ಸಾಲಿಗೆ ಕಬ್ಬು ನುರಿಸುವ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಸಕ್ಕರೆ ಕಾರ್ಖಾನಗೆಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಇತ್ತೀಚಿಗೆ ಜಿಲ್ಲೆಯಲ್ಲಿ ರೈತ ಮತ್ತು ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಜಾರಿಗೆ ತಂದಿದ್ದು, ಇದರಿಂದ ಜಿಲ್ಲೆಯ ರೈತರಿಗೆ ಒಟ್ಟಾರೆ 60 ಕೋಟಿ ರೂ. ಲಾಭವಾಗಲಿದೆ. ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದ್ದು, ಅಲ್ಲಿ ಎಫ್.ಆರ್.ಪಿ. ದರ ನಿಗದಿಯಾಗಲಿದೆ. ಇದರನ್ವಯ ಜಲ್ಲೆಯಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಹೋಂ ಗಾರ್ಡ್ ನೇಮಕಾತಿಗೆ ಲಂಚ: ರಾಯಚೂರಲ್ಲಿ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ”

ರಾಯಚೂರು: ಹೋಂ ಗಾರ್ಡ್ ನೇಮಕಾತಿಗೆ ಲಂಚ ಪಡೆಯುತ್ತಿದ್ದ ರಾಯಚೂರಿನ ಹೋಂ ಗಾರ್ಡ್ ಕಮಾಂಡೆಂಟ್ ಜಂಬಣ್ಣ ರಾಮಸ್ವಾಮಿ ಅವರು ಲೋಕಾಯುಕ್ತದ ಜಾಲಕ್ಕೆ…

2 hours ago

ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ…

15 hours ago

ಮಧುಗಿರಿಯಲ್ಲಿ ಬಾಲಕನ ಆತ್ಮಹತ್ಯೆ: ಅನಾರೋಗ್ಯ, ಪರೀಕ್ಷಾ ಫಲಿತಾಂಶದಿಂದ ಖಿನ್ನತೆ ಹಿನ್ನೆಲೆಯಲ್ಲಿ ದಾರುಣ ಘಟನೆ

ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ…

17 hours ago

ಲಂಚ ಪಡೆಯುವಾಗ ಜೆಸ್ಕಾಂ ಎಂಜಿನಿಯರ್ ಶೇಖರ್ ಅರೆಸ್ಟ್ : ಲೋಕಾಯುಕ್ತ ಪೊಲೀಸರ ದಾಳಿ

ಕಲಬುರಗಿಯಲ್ಲಿ ಮಂಗಳವಾರ ದಿನದ ಬೆಳಗ್ಗೆ ಮಹತ್ವದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ಗ್ರಾಮೀಣ…

18 hours ago

“ಐಟಿಐ ಕಾಲೇಜಿನಲ್ಲಿ ನಿರ್ಲಕ್ಷ್ಯದ ಛಾಯೆ: ವಿದ್ಯಾರ್ಥಿಗಳಿಗೆ ತಲುಪದೆ ಗೋದಾಮಿನಲ್ಲಿ ಹಾಳಾಗುತ್ತಿರುವ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು”

ಗೌರಿಬಿದನೂರು: ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸಮವಸ್ತ್ರ, ಶೂ, ಬ್ಯಾಗ್,…

20 hours ago

ಭೋಪಾಲ್ ಜಿಮ್ ವಿವಾದ: ಧರ್ಮ ಆಧಾರದ ಹೇಳಿಕೆ ನೀಡಿದ ಸಬ್ ಇನ್ಸ್‌ಪೆಕ್ಟರ್ ವಜಾ

ಭೋಪಾಲ್: ಜಿಮ್ ಕೇಂದ್ರವೊಂದರಲ್ಲಿ ಮುಸ್ಲಿಮರಿಗೆ ಪ್ರವೇಶ ನಿರ್ಬಂಧಿಸಬೇಕೆಂದು ಹೇಳಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಭೋಪಾಲ್ ನಗರದಲ್ಲಿ ಸೇವೆ ನಿರ್ವಹಿಸುತ್ತಿದ್ದ ಸಬ್…

21 hours ago