Latest

ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ: ಪರವಾನಿಗೆ ಪಡೆಯಲು ರೈತರಲ್ಲಿ ಡಿ.ಸಿ. ಮನವಿ

ಕಲಬುರಗಿ-ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಒಂದು ಸಕ್ಕರೆ ಕಾರ್ಖಾನೆ ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಬಯಸಿದ್ದಲ್ಲಿ ಕರ್ನಾಟಕ ಶುಗರಕೇನ್ (ರೆಗ್ಯೂಲೇಷನ್ ಮತು ಡಿಸ್ಟ್ರಿಬೂಷನ್) ಕಾಯ್ದೆಯ ಶೆಡ್ಯೂಲ್-2 ಪ್ರಕಾರ ನಿಗಧಿತ ನಮೂನೆ-2ರಲ್ಲಿ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡಿ ಅದರೊಂದಿಗೆ 100 ರೂ. ಸೆಲ್ಫ್ ಚೆಕ್ ಮತ್ತು ನಿಗದಿತ ಶುಲ್ಕ 5 ರೂ. ಗಳನ್ನು ಕೆ2 ಚಲನ್ ಮೂಲಕ ಲೆಕ್ಕ ಶೀರ್ಷಿಕೆ 0070-60-800-3-04-000 ಗೆ ಸಂದಾಯ ಮಾಡಿ ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯಲ್ಲಿ ಸ್ಥಾಪಿಸಲಾಗಿರುವ ಕೌಂಟರನಲ್ಲಿ ಅರ್ಜಿ ಸಲ್ಲಿಸಿದಲ್ಲಿ ನಮೂನೆ-1ರಲ್ಲಿ ಕಬ್ಬು ರಫ್ತಿಗೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಜಿಲ್ಲೆಯ ಚಿಣಮಗೇರಾದ ಕೆ.ಪಿ.ಆರ್.ಶುಗರ್ ಕಂಪನಿಗೆ 16 ಗ್ರಾಮಗಳ 18 ಲಕ್ಷ ಕಬ್ಬು ಮತ್ತು ಎನ್.ಎಸ್.ಎಲ್ ಶುಗರ್ ಕಾರ್ಖಾನೆ ವ್ಯಾಪ್ತಿಯ 110 ಗ್ರಾಮಗಳ 13 ಲಕ್ಷ ಟನ್ ಕಬ್ಬು ಕಟಾವಿಗೆ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಈ ಬಾರಿ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 60 ಲಕ್ಷ ಟನ್ ಕಬ್ಬು ಬೆಳೆಯಲಾಗಿದೆ. ಪ್ರಸಕ್ತ 2022-23ನೇ ಸಾಲಿಗೆ ಕಬ್ಬು ನುರಿಸುವ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಸಕ್ಕರೆ ಕಾರ್ಖಾನಗೆಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಇತ್ತೀಚಿಗೆ ಜಿಲ್ಲೆಯಲ್ಲಿ ರೈತ ಮತ್ತು ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಜಾರಿಗೆ ತಂದಿದ್ದು, ಇದರಿಂದ ಜಿಲ್ಲೆಯ ರೈತರಿಗೆ ಒಟ್ಟಾರೆ 60 ಕೋಟಿ ರೂ. ಲಾಭವಾಗಲಿದೆ. ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದ್ದು, ಅಲ್ಲಿ ಎಫ್.ಆರ್.ಪಿ. ದರ ನಿಗದಿಯಾಗಲಿದೆ. ಇದರನ್ವಯ ಜಲ್ಲೆಯಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago