ಕಲಬುರಗಿ-ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಒಂದು ಸಕ್ಕರೆ ಕಾರ್ಖಾನೆ ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಬಯಸಿದ್ದಲ್ಲಿ ಕರ್ನಾಟಕ ಶುಗರಕೇನ್ (ರೆಗ್ಯೂಲೇಷನ್ ಮತು ಡಿಸ್ಟ್ರಿಬೂಷನ್) ಕಾಯ್ದೆಯ ಶೆಡ್ಯೂಲ್-2 ಪ್ರಕಾರ ನಿಗಧಿತ ನಮೂನೆ-2ರಲ್ಲಿ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡಿ ಅದರೊಂದಿಗೆ 100 ರೂ. ಸೆಲ್ಫ್ ಚೆಕ್ ಮತ್ತು ನಿಗದಿತ ಶುಲ್ಕ 5 ರೂ. ಗಳನ್ನು ಕೆ2 ಚಲನ್ ಮೂಲಕ ಲೆಕ್ಕ ಶೀರ್ಷಿಕೆ 0070-60-800-3-04-000 ಗೆ ಸಂದಾಯ ಮಾಡಿ ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯಲ್ಲಿ ಸ್ಥಾಪಿಸಲಾಗಿರುವ ಕೌಂಟರನಲ್ಲಿ ಅರ್ಜಿ ಸಲ್ಲಿಸಿದಲ್ಲಿ ನಮೂನೆ-1ರಲ್ಲಿ ಕಬ್ಬು ರಫ್ತಿಗೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಜಿಲ್ಲೆಯ ಚಿಣಮಗೇರಾದ ಕೆ.ಪಿ.ಆರ್.ಶುಗರ್ ಕಂಪನಿಗೆ 16 ಗ್ರಾಮಗಳ 18 ಲಕ್ಷ ಕಬ್ಬು ಮತ್ತು ಎನ್.ಎಸ್.ಎಲ್ ಶುಗರ್ ಕಾರ್ಖಾನೆ ವ್ಯಾಪ್ತಿಯ 110 ಗ್ರಾಮಗಳ 13 ಲಕ್ಷ ಟನ್ ಕಬ್ಬು ಕಟಾವಿಗೆ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಈ ಬಾರಿ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 60 ಲಕ್ಷ ಟನ್ ಕಬ್ಬು ಬೆಳೆಯಲಾಗಿದೆ. ಪ್ರಸಕ್ತ 2022-23ನೇ ಸಾಲಿಗೆ ಕಬ್ಬು ನುರಿಸುವ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಸಕ್ಕರೆ ಕಾರ್ಖಾನಗೆಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಇತ್ತೀಚಿಗೆ ಜಿಲ್ಲೆಯಲ್ಲಿ ರೈತ ಮತ್ತು ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಜಾರಿಗೆ ತಂದಿದ್ದು, ಇದರಿಂದ ಜಿಲ್ಲೆಯ ರೈತರಿಗೆ ಒಟ್ಟಾರೆ 60 ಕೋಟಿ ರೂ. ಲಾಭವಾಗಲಿದೆ. ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದ್ದು, ಅಲ್ಲಿ ಎಫ್.ಆರ್.ಪಿ. ದರ ನಿಗದಿಯಾಗಲಿದೆ. ಇದರನ್ವಯ ಜಲ್ಲೆಯಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
ವರದಿ ನಾಗರಾಜ್ ಗೊಬ್ಬುರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…