Latest

ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ: ಪರವಾನಿಗೆ ಪಡೆಯಲು ರೈತರಲ್ಲಿ ಡಿ.ಸಿ. ಮನವಿ

ಕಲಬುರಗಿ-ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಒಂದು ಸಕ್ಕರೆ ಕಾರ್ಖಾನೆ ಮೀಸಲು ಪ್ರದೇಶದಿಂದ ಬೇರೆ ಪ್ರದೇಶಕ್ಕೆ ಕಬ್ಬು ಮಾರಾಟ ಮಾಡಲು ಬಯಸಿದ್ದಲ್ಲಿ ಕರ್ನಾಟಕ ಶುಗರಕೇನ್ (ರೆಗ್ಯೂಲೇಷನ್ ಮತು ಡಿಸ್ಟ್ರಿಬೂಷನ್) ಕಾಯ್ದೆಯ ಶೆಡ್ಯೂಲ್-2 ಪ್ರಕಾರ ನಿಗಧಿತ ನಮೂನೆ-2ರಲ್ಲಿ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡಿ ಅದರೊಂದಿಗೆ 100 ರೂ. ಸೆಲ್ಫ್ ಚೆಕ್ ಮತ್ತು ನಿಗದಿತ ಶುಲ್ಕ 5 ರೂ. ಗಳನ್ನು ಕೆ2 ಚಲನ್ ಮೂಲಕ ಲೆಕ್ಕ ಶೀರ್ಷಿಕೆ 0070-60-800-3-04-000 ಗೆ ಸಂದಾಯ ಮಾಡಿ ಕಲಬುರಗಿ ಮಿನಿ ವಿಧಾನಸೌಧದಲ್ಲಿರುವ ಆಹಾರ ಇಲಾಖೆಯಲ್ಲಿ ಸ್ಥಾಪಿಸಲಾಗಿರುವ ಕೌಂಟರನಲ್ಲಿ ಅರ್ಜಿ ಸಲ್ಲಿಸಿದಲ್ಲಿ ನಮೂನೆ-1ರಲ್ಲಿ ಕಬ್ಬು ರಫ್ತಿಗೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಜಿಲ್ಲೆಯ ಚಿಣಮಗೇರಾದ ಕೆ.ಪಿ.ಆರ್.ಶುಗರ್ ಕಂಪನಿಗೆ 16 ಗ್ರಾಮಗಳ 18 ಲಕ್ಷ ಕಬ್ಬು ಮತ್ತು ಎನ್.ಎಸ್.ಎಲ್ ಶುಗರ್ ಕಾರ್ಖಾನೆ ವ್ಯಾಪ್ತಿಯ 110 ಗ್ರಾಮಗಳ 13 ಲಕ್ಷ ಟನ್ ಕಬ್ಬು ಕಟಾವಿಗೆ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಈ ಬಾರಿ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 60 ಲಕ್ಷ ಟನ್ ಕಬ್ಬು ಬೆಳೆಯಲಾಗಿದೆ. ಪ್ರಸಕ್ತ 2022-23ನೇ ಸಾಲಿಗೆ ಕಬ್ಬು ನುರಿಸುವ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಸಕ್ಕರೆ ಕಾರ್ಖಾನಗೆಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಇತ್ತೀಚಿಗೆ ಜಿಲ್ಲೆಯಲ್ಲಿ ರೈತ ಮತ್ತು ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಜಾರಿಗೆ ತಂದಿದ್ದು, ಇದರಿಂದ ಜಿಲ್ಲೆಯ ರೈತರಿಗೆ ಒಟ್ಟಾರೆ 60 ಕೋಟಿ ರೂ. ಲಾಭವಾಗಲಿದೆ. ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದ್ದು, ಅಲ್ಲಿ ಎಫ್.ಆರ್.ಪಿ. ದರ ನಿಗದಿಯಾಗಲಿದೆ. ಇದರನ್ವಯ ಜಲ್ಲೆಯಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

4 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

4 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

8 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

13 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

13 hours ago