Latest

ಸಲೂನ್ ಪ್ರಕರಣ: ಲೇಡಿ ಡಾನ್ ಕಾವ್ಯ ಹಾಗೂ ಇನ್ನಿಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು

ಬೆಂಗಳೂರು, ಅಮೃತಹಳ್ಳಿ: ನಗರದ ಅಮೃತಹಳ್ಳಿಯಲ್ಲಿ ಮಹಿಳಾ ನೇತೃತ್ವದ ಗ್ಯಾಂಗ್ ಒಂದು ಸಲೂನ್‌ ಮೇಲೆ ದಾಳಿ ನಡೆಸಿ, ಮಾಲಿಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೋಲೀಸರು ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ.

ಸಂಜು (40) ಎಂಬುವವರು ಹಿಂದೆ ಕೋಡಿಗೆಹಳ್ಳಿ ಬಳಿ ಇರುವ ‘ಸಾರಾ ಸ್ಪಾ’ಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸ್ಪಾದಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳನ್ನು ವಿರೋಧಿಸಿದ ಕಾರಣ, ಅವರು ಕೆಲಸ ತೊರೆದು ಸ್ವತಂತ್ರವಾಗಿ ತಮ್ಮದೇ ಸಲೂನ್ ತೆರೆಯುತ್ತಾರೆ. ಇದರಿಂದ ಆಕ್ರೋಶಗೊಂಡ ‘ಸಾರಾ ಸ್ಪಾ’ ಮಾಲಕಿ ನಿಶಾ, ತನ್ನ ಸ್ನೇಹಿತೆ ಕಾವ್ಯಾ ಹಾಗೂ ಮತ್ತೊಬ್ಬನಾದ ಮೊಹಮ್ಮದ್ ಜೊತೆಯಲ್ಲಿ ಯೋಜಿತವಾಗಿ ದಾಳಿ ನಡೆಸಿದ್ದಾಳೆ.

ಘಟನೆಯಂದು ಈ ಮೂವರು ಸಲೂನ್‌ಗೆ ನುಗ್ಗಿ ಸಂಜುವಿಗೆ ದುಷ್ಕರ್ಮವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಕಾರಿನಲ್ಲಿ ಎತ್ತಿಕೊಂಡು ಕಿಡ್ನ್ಯಾಪ್ ಮಾಡುವ ತನಕ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಸಂಜು ನಂತರ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಅವರು ನೀಡಿದ ದೂರಿನಲ್ಲಿ, ಗ್ಯಾಂಗ್ ಸದಸ್ಯರು ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದುದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ ನೀಡಿದ ಮಾಹಿತಿ ಸಹ ಉಲ್ಲೇಖಿಸಿದ್ದಾರೆ.

ಅಮೃತಹಳ್ಳಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಈಗಾಗಲೇ ನಿಶಾ, ಕಾವ್ಯಾ ಮತ್ತು ಮೊಹಮ್ಮದ್ ಬಂಧಿತರಾಗಿದ್ದು, ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.

ಪೋಲೀಸರು ಪ್ರಕರಣವನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಇನ್ನಷ್ಟು ಆರೋಪಿಗಳ ಪಾತ್ರದ ಬಗ್ಗೆ ಗಂಭೀರ ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago