Latest

ಸಲೂನ್ ಪ್ರಕರಣ: ಲೇಡಿ ಡಾನ್ ಕಾವ್ಯ ಹಾಗೂ ಇನ್ನಿಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು

ಬೆಂಗಳೂರು, ಅಮೃತಹಳ್ಳಿ: ನಗರದ ಅಮೃತಹಳ್ಳಿಯಲ್ಲಿ ಮಹಿಳಾ ನೇತೃತ್ವದ ಗ್ಯಾಂಗ್ ಒಂದು ಸಲೂನ್‌ ಮೇಲೆ ದಾಳಿ ನಡೆಸಿ, ಮಾಲಿಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೋಲೀಸರು ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ.

ಸಂಜು (40) ಎಂಬುವವರು ಹಿಂದೆ ಕೋಡಿಗೆಹಳ್ಳಿ ಬಳಿ ಇರುವ ‘ಸಾರಾ ಸ್ಪಾ’ಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸ್ಪಾದಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳನ್ನು ವಿರೋಧಿಸಿದ ಕಾರಣ, ಅವರು ಕೆಲಸ ತೊರೆದು ಸ್ವತಂತ್ರವಾಗಿ ತಮ್ಮದೇ ಸಲೂನ್ ತೆರೆಯುತ್ತಾರೆ. ಇದರಿಂದ ಆಕ್ರೋಶಗೊಂಡ ‘ಸಾರಾ ಸ್ಪಾ’ ಮಾಲಕಿ ನಿಶಾ, ತನ್ನ ಸ್ನೇಹಿತೆ ಕಾವ್ಯಾ ಹಾಗೂ ಮತ್ತೊಬ್ಬನಾದ ಮೊಹಮ್ಮದ್ ಜೊತೆಯಲ್ಲಿ ಯೋಜಿತವಾಗಿ ದಾಳಿ ನಡೆಸಿದ್ದಾಳೆ.

ಘಟನೆಯಂದು ಈ ಮೂವರು ಸಲೂನ್‌ಗೆ ನುಗ್ಗಿ ಸಂಜುವಿಗೆ ದುಷ್ಕರ್ಮವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಕಾರಿನಲ್ಲಿ ಎತ್ತಿಕೊಂಡು ಕಿಡ್ನ್ಯಾಪ್ ಮಾಡುವ ತನಕ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಸಂಜು ನಂತರ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಅವರು ನೀಡಿದ ದೂರಿನಲ್ಲಿ, ಗ್ಯಾಂಗ್ ಸದಸ್ಯರು ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದುದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ ನೀಡಿದ ಮಾಹಿತಿ ಸಹ ಉಲ್ಲೇಖಿಸಿದ್ದಾರೆ.

ಅಮೃತಹಳ್ಳಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಈಗಾಗಲೇ ನಿಶಾ, ಕಾವ್ಯಾ ಮತ್ತು ಮೊಹಮ್ಮದ್ ಬಂಧಿತರಾಗಿದ್ದು, ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.

ಪೋಲೀಸರು ಪ್ರಕರಣವನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಇನ್ನಷ್ಟು ಆರೋಪಿಗಳ ಪಾತ್ರದ ಬಗ್ಗೆ ಗಂಭೀರ ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

15 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

16 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

17 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

18 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

19 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

22 hours ago