ಬೆಂಗಳೂರು, ಅಮೃತಹಳ್ಳಿ: ನಗರದ ಅಮೃತಹಳ್ಳಿಯಲ್ಲಿ ಮಹಿಳಾ ನೇತೃತ್ವದ ಗ್ಯಾಂಗ್ ಒಂದು ಸಲೂನ್ ಮೇಲೆ ದಾಳಿ ನಡೆಸಿ, ಮಾಲಿಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೋಲೀಸರು ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ.
ಸಂಜು (40) ಎಂಬುವವರು ಹಿಂದೆ ಕೋಡಿಗೆಹಳ್ಳಿ ಬಳಿ ಇರುವ ‘ಸಾರಾ ಸ್ಪಾ’ಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸ್ಪಾದಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳನ್ನು ವಿರೋಧಿಸಿದ ಕಾರಣ, ಅವರು ಕೆಲಸ ತೊರೆದು ಸ್ವತಂತ್ರವಾಗಿ ತಮ್ಮದೇ ಸಲೂನ್ ತೆರೆಯುತ್ತಾರೆ. ಇದರಿಂದ ಆಕ್ರೋಶಗೊಂಡ ‘ಸಾರಾ ಸ್ಪಾ’ ಮಾಲಕಿ ನಿಶಾ, ತನ್ನ ಸ್ನೇಹಿತೆ ಕಾವ್ಯಾ ಹಾಗೂ ಮತ್ತೊಬ್ಬನಾದ ಮೊಹಮ್ಮದ್ ಜೊತೆಯಲ್ಲಿ ಯೋಜಿತವಾಗಿ ದಾಳಿ ನಡೆಸಿದ್ದಾಳೆ.
ಘಟನೆಯಂದು ಈ ಮೂವರು ಸಲೂನ್ಗೆ ನುಗ್ಗಿ ಸಂಜುವಿಗೆ ದುಷ್ಕರ್ಮವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಕಾರಿನಲ್ಲಿ ಎತ್ತಿಕೊಂಡು ಕಿಡ್ನ್ಯಾಪ್ ಮಾಡುವ ತನಕ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಸಂಜು ನಂತರ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಅವರು ನೀಡಿದ ದೂರಿನಲ್ಲಿ, ಗ್ಯಾಂಗ್ ಸದಸ್ಯರು ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದುದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ ನೀಡಿದ ಮಾಹಿತಿ ಸಹ ಉಲ್ಲೇಖಿಸಿದ್ದಾರೆ.
ಅಮೃತಹಳ್ಳಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಈಗಾಗಲೇ ನಿಶಾ, ಕಾವ್ಯಾ ಮತ್ತು ಮೊಹಮ್ಮದ್ ಬಂಧಿತರಾಗಿದ್ದು, ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.
ಪೋಲೀಸರು ಪ್ರಕರಣವನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಇನ್ನಷ್ಟು ಆರೋಪಿಗಳ ಪಾತ್ರದ ಬಗ್ಗೆ ಗಂಭೀರ ತನಿಖೆ ಮುಂದುವರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…