Latest

ಅಥಣಿ ತಾಲೂಕಿನ ಐಗಳಿಯಲ್ಲಿ ಮರಳು ಸಂಗ್ರಹ ವಿವಾದ: ಎಸ್‌ಪಿ ರವೀಂದ್ರ ಗದಾಡಿ ಸ್ಪಷ್ಟನೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿ ಅಕ್ರಮ ಮರಳು ಸಂಗ್ರಹದ ಕುರಿತು ವಾದಪ್ರತಿವಾದಗಳು ಉಲ್ಬಣಗೊಂಡಿವೆ. ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆಯ ಹೆಸರಿನಲ್ಲಿರುವ ಜಮೀನಿನಲ್ಲಿ ಮರಳು ಸಂಗ್ರಹಿತವಾಗಿರುವ ಕುರಿತು ದೂರು ನೀಡಲಾಗಿದೆ.

ಗೃಹ ಸಚಿವರಿಗೆ ಸಲ್ಲಿಸಿದ ಮನವಿ

ಐಗಳಿ ಗ್ರಾಮದ ವಕೀಲರಾದ ವಿನೋದ್ ಚಕ್ರವರ್ತಿ ಮತ್ತು ಸುನೀಲ್ ಜುಂಜರವಾಡ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಗಮನಕ್ಕೆ ಈ ವಿಷಯವನ್ನು ತಂದಿದ್ದಾರೆ. ಅವರ ಪ್ರಕಾರ, ಸ.ನಂ. 215ರಲ್ಲಿ 1.5 ಎಕರೆ ಜಮೀನಿನಲ್ಲಿ ಅನಧಿಕೃತವಾಗಿ ಮರಳು ಸಂಗ್ರಹಿಸಲಾಗಿದೆ. ಇದನ್ನು ದೃಢೀಕರಿಸುವ ವೀಡಿಯೋ ಸಹಿತ ದೂರು ಅಥಣಿ ತಾಲೂಕು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ, ಅಥಣಿ ತಹಸೀಲ್ದಾರ್‌ ಮತ್ತು ಐಗಳಿ ಪಿಎಸ್‌ಐಗೆ ಸಲ್ಲಿಸಲಾಗಿದೆ.

ಗಣಿ ಇಲಾಖೆ ತಪಾಸಣೆ, ಆದರೆ ಕ್ರಮ ಏನು?

ದೂರು ಸ್ವೀಕರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಆರ್‌ಐ (ರಾಜಸ್ವ ನಿರೀಕ್ಷಕರು) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ತನಕ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರುದಾರರು ಆಕ್ಷೇಪಿಸಿದ್ದಾರೆ.

ನೋಟಿಸ್‌ ಜಾರಿ ಮತ್ತು ಮರಳು ಜಪ್ತಿ

ಈ ಪ್ರಕರಣದ ಸಂಬಂಧ, ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ರವೀಂದ್ರ ಗದಾಡಿ ಅವರ ತಂದೆಗೆ ಜ.27ರಂದು ನೋಟಿಸ್‌ ಜಾರಿ ಮಾಡಿದ್ದಾರೆ. ಈ ನೋಟಿಸ್‌ನಲ್ಲಿ, ಅಥಣಿ ತಹಸೀಲ್ದಾರ್‌ ಸೂಚನೆಯ ಮೇರೆಗೆ ಜ.25ರಂದು ರಾಜಸ್ವ ನಿರೀಕ್ಷಕರು, ಐಗಳಿ ಆಡಳಿತಾಧಿಕಾರಿ ಮತ್ತು ಪಂಚಾಯತಿ ಕಾರ್ಯದರ್ಶಿಗಳು ಜಮೀನಿನಲ್ಲಿ 210 ಬ್ರಾಸ್ ಮರಳು ಸಂಗ್ರಹಿತವಾಗಿರುವುದು ಕಂಡುಬಂದಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಮರಳಿನ ಕಾನೂನುಬದ್ಧ ದಾಖಲೆಗಳು ನೀಡುವಂತೆ ಸೂಚನೆ ನೀಡಲಾಗಿದೆ.

ಎಸ್‌ಪಿ ರವೀಂದ್ರ ಗದಾಡಿ ಸ್ಪಷ್ಟನೆ

ಈ ಕುರಿತು ಸ್ಪಷ್ಟನೆ ನೀಡಿರುವ ಎಸ್‌ಪಿ ರವೀಂದ್ರ ಗದಾಡಿ, ತಮ್ಮ ತಂದೆಯ ಜಮೀನಿನಲ್ಲಿ ಮರಳು ಸಂಗ್ರಹಣೆಯು ಸಂಪೂರ್ಣ ಕಾನೂನುಬದ್ಧವಾಗಿಯೇ ಮಾಡಲಾಗಿದೆ ಎಂದು ತಿಳಿಸಿದ್ದಾರೆ. “ಈ ಸಂಬಂಧ ಅಗತ್ಯ ದಾಖಲೆಗಳು ಲಭ್ಯವಿವೆ. ನನ್ನ ಹೆಸರನ್ನು ಬಳಸಿಕೊಂಡು ಅಪಪ್ರಚಾರ ನಡೆಯುತ್ತಿದೆ. ವಿನೋದ್ ಚಕ್ರವರ್ತಿ ಮತ್ತು ಸುನಿಲ್ ಜುಂಜರವಾಡ ನನ್ನ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರಕರಣದ ಮುಂದಿನ ಹಂತ

ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮಾನಾಸ್ಪದ ಮೌನ ಮತ್ತು ಪ್ರಭಾವಿಗಳ ಹೆಸರುಗಳು ಕೇಳಿಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತದಿಂದ ಏನೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಗಮನಿಸಬೇಕಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago