Latest

ಅಥಣಿ ತಾಲೂಕಿನ ಐಗಳಿಯಲ್ಲಿ ಮರಳು ಸಂಗ್ರಹ ವಿವಾದ: ಎಸ್‌ಪಿ ರವೀಂದ್ರ ಗದಾಡಿ ಸ್ಪಷ್ಟನೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿ ಅಕ್ರಮ ಮರಳು ಸಂಗ್ರಹದ ಕುರಿತು ವಾದಪ್ರತಿವಾದಗಳು ಉಲ್ಬಣಗೊಂಡಿವೆ. ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆಯ ಹೆಸರಿನಲ್ಲಿರುವ ಜಮೀನಿನಲ್ಲಿ ಮರಳು ಸಂಗ್ರಹಿತವಾಗಿರುವ ಕುರಿತು ದೂರು ನೀಡಲಾಗಿದೆ.

ಗೃಹ ಸಚಿವರಿಗೆ ಸಲ್ಲಿಸಿದ ಮನವಿ

ಐಗಳಿ ಗ್ರಾಮದ ವಕೀಲರಾದ ವಿನೋದ್ ಚಕ್ರವರ್ತಿ ಮತ್ತು ಸುನೀಲ್ ಜುಂಜರವಾಡ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಗಮನಕ್ಕೆ ಈ ವಿಷಯವನ್ನು ತಂದಿದ್ದಾರೆ. ಅವರ ಪ್ರಕಾರ, ಸ.ನಂ. 215ರಲ್ಲಿ 1.5 ಎಕರೆ ಜಮೀನಿನಲ್ಲಿ ಅನಧಿಕೃತವಾಗಿ ಮರಳು ಸಂಗ್ರಹಿಸಲಾಗಿದೆ. ಇದನ್ನು ದೃಢೀಕರಿಸುವ ವೀಡಿಯೋ ಸಹಿತ ದೂರು ಅಥಣಿ ತಾಲೂಕು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ, ಅಥಣಿ ತಹಸೀಲ್ದಾರ್‌ ಮತ್ತು ಐಗಳಿ ಪಿಎಸ್‌ಐಗೆ ಸಲ್ಲಿಸಲಾಗಿದೆ.

ಗಣಿ ಇಲಾಖೆ ತಪಾಸಣೆ, ಆದರೆ ಕ್ರಮ ಏನು?

ದೂರು ಸ್ವೀಕರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಆರ್‌ಐ (ರಾಜಸ್ವ ನಿರೀಕ್ಷಕರು) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ತನಕ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರುದಾರರು ಆಕ್ಷೇಪಿಸಿದ್ದಾರೆ.

ನೋಟಿಸ್‌ ಜಾರಿ ಮತ್ತು ಮರಳು ಜಪ್ತಿ

ಈ ಪ್ರಕರಣದ ಸಂಬಂಧ, ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ರವೀಂದ್ರ ಗದಾಡಿ ಅವರ ತಂದೆಗೆ ಜ.27ರಂದು ನೋಟಿಸ್‌ ಜಾರಿ ಮಾಡಿದ್ದಾರೆ. ಈ ನೋಟಿಸ್‌ನಲ್ಲಿ, ಅಥಣಿ ತಹಸೀಲ್ದಾರ್‌ ಸೂಚನೆಯ ಮೇರೆಗೆ ಜ.25ರಂದು ರಾಜಸ್ವ ನಿರೀಕ್ಷಕರು, ಐಗಳಿ ಆಡಳಿತಾಧಿಕಾರಿ ಮತ್ತು ಪಂಚಾಯತಿ ಕಾರ್ಯದರ್ಶಿಗಳು ಜಮೀನಿನಲ್ಲಿ 210 ಬ್ರಾಸ್ ಮರಳು ಸಂಗ್ರಹಿತವಾಗಿರುವುದು ಕಂಡುಬಂದಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಮರಳಿನ ಕಾನೂನುಬದ್ಧ ದಾಖಲೆಗಳು ನೀಡುವಂತೆ ಸೂಚನೆ ನೀಡಲಾಗಿದೆ.

ಎಸ್‌ಪಿ ರವೀಂದ್ರ ಗದಾಡಿ ಸ್ಪಷ್ಟನೆ

ಈ ಕುರಿತು ಸ್ಪಷ್ಟನೆ ನೀಡಿರುವ ಎಸ್‌ಪಿ ರವೀಂದ್ರ ಗದಾಡಿ, ತಮ್ಮ ತಂದೆಯ ಜಮೀನಿನಲ್ಲಿ ಮರಳು ಸಂಗ್ರಹಣೆಯು ಸಂಪೂರ್ಣ ಕಾನೂನುಬದ್ಧವಾಗಿಯೇ ಮಾಡಲಾಗಿದೆ ಎಂದು ತಿಳಿಸಿದ್ದಾರೆ. “ಈ ಸಂಬಂಧ ಅಗತ್ಯ ದಾಖಲೆಗಳು ಲಭ್ಯವಿವೆ. ನನ್ನ ಹೆಸರನ್ನು ಬಳಸಿಕೊಂಡು ಅಪಪ್ರಚಾರ ನಡೆಯುತ್ತಿದೆ. ವಿನೋದ್ ಚಕ್ರವರ್ತಿ ಮತ್ತು ಸುನಿಲ್ ಜುಂಜರವಾಡ ನನ್ನ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರಕರಣದ ಮುಂದಿನ ಹಂತ

ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮಾನಾಸ್ಪದ ಮೌನ ಮತ್ತು ಪ್ರಭಾವಿಗಳ ಹೆಸರುಗಳು ಕೇಳಿಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತದಿಂದ ಏನೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಗಮನಿಸಬೇಕಾಗಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago