Cinema

ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ: ವಂಚಕರ ವಿರುದ್ಧ ಸೈಬರ್ ಕ್ರೈಂ ದೂರು

ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ ಮಾಡಲಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖದೀಮರು ನಕಲಿ ನಂಬರ್ ಬಳಸಿಕೊಂಡು, ಅದಕ್ಕೆ ನಟಿಯ ಫೋಟೋ ಡಿಸ್ಪ್ಲೇ ಪಿಕ್ಚರ್ (DP) ಇಟ್ಟು, ಜನರಿಂದ ಹಣಕ್ಕೆ ಬೇಡಿಕೆ ಇಡುತ್ತಿರುವುದಾಗಿ ವರದಿಯಾಗಿದೆ. ಈ ಕುರಿತು ಶರಣ್ಯ ಸ್ವತಃ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಟಿಯ ಹೆಸರನ್ನು ಬಳಸಿಕೊಂಡು ವಂಚನೆ ನಡೆಸುತ್ತಿರುವ ಬಗ್ಗೆ ಅವರು ಖುದ್ದಾಗಿ ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಆದರೆ, ಆ ನಂಬರ್ ನನ್ನದು ಅಲ್ಲ. ಇದೊಂದು ನಕಲಿ ನಂಬರ್, ದಯವಿಟ್ಟು ಅದನ್ನು ನಂಬಿ ಯಾರು ಹಣ ಕಳುಹಿಸಬೇಡಿ,” ಎಂದು ಶರಣ್ಯ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಹಾಗೂ, ವಂಚಕರು ಟ್ರೂ ಕಾಲರ್‌ನಲ್ಲೂ ಶರಣ್ಯ ಶೆಟ್ಟಿ ಹೆಸರನ್ನು ಬಳಸಿ, ಹೀರೋಯಿನ್ಸ್ ಡಿಟೈಲ್ಸ್ ಪಡೆಯಲು ಪ್ರಯತ್ನಿಸುತ್ತಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಈ ತಂತ್ರಗಾರಿಕೆಯಿಂದ ಜನರನ್ನು ವಂಚಿಸಲು ಯತ್ನಿಸುತ್ತಿರುವ ಈ ದುಷ್ಕರ್ಮಿಗಳ ವಿರುದ್ಧ ತಾವು ಸೈಬರ್ ಕ್ರೈಂ ಇಲಾಖೆಗೆ ದೂರು ನೀಡುತ್ತಿರುವುದಾಗಿ ನಟಿ ತಿಳಿಸಿದ್ದಾರೆ.

ಜನಪ್ರಿಯ ನಟಿ ಶರಣ್ಯ ಶೆಟ್ಟಿ

ಶರಣ್ಯ ಶೆಟ್ಟಿ, ಕಿರುತೆರೆಯ ‘ಗಟ್ಟಿಮೇಳ’ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ಗಮನ ಸೆಳೆದವರು. ನಂತರ ಅವರು ಹಲವಾರು ಹಿರಿತೆರೆ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ, ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜತೆಯೂ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಈ ಘಟನೆ ಸಂಬಂಧ, ಶರಣ್ಯ ಅಭಿಮಾನಿಗಳಿಗೆ ಎಚ್ಚರಿಕೆ ನೀಡುತ್ತಾ, ಯಾವುದೇ ವಂಚನೆಗೊಳಗಾಗದಂತೆ ಜಾಗರೂಕರಾಗುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago