Cinema

ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ: ವಂಚಕರ ವಿರುದ್ಧ ಸೈಬರ್ ಕ್ರೈಂ ದೂರು

ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ ಮಾಡಲಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖದೀಮರು ನಕಲಿ ನಂಬರ್ ಬಳಸಿಕೊಂಡು, ಅದಕ್ಕೆ ನಟಿಯ ಫೋಟೋ ಡಿಸ್ಪ್ಲೇ ಪಿಕ್ಚರ್ (DP) ಇಟ್ಟು, ಜನರಿಂದ ಹಣಕ್ಕೆ ಬೇಡಿಕೆ ಇಡುತ್ತಿರುವುದಾಗಿ ವರದಿಯಾಗಿದೆ. ಈ ಕುರಿತು ಶರಣ್ಯ ಸ್ವತಃ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಟಿಯ ಹೆಸರನ್ನು ಬಳಸಿಕೊಂಡು ವಂಚನೆ ನಡೆಸುತ್ತಿರುವ ಬಗ್ಗೆ ಅವರು ಖುದ್ದಾಗಿ ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಆದರೆ, ಆ ನಂಬರ್ ನನ್ನದು ಅಲ್ಲ. ಇದೊಂದು ನಕಲಿ ನಂಬರ್, ದಯವಿಟ್ಟು ಅದನ್ನು ನಂಬಿ ಯಾರು ಹಣ ಕಳುಹಿಸಬೇಡಿ,” ಎಂದು ಶರಣ್ಯ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಹಾಗೂ, ವಂಚಕರು ಟ್ರೂ ಕಾಲರ್‌ನಲ್ಲೂ ಶರಣ್ಯ ಶೆಟ್ಟಿ ಹೆಸರನ್ನು ಬಳಸಿ, ಹೀರೋಯಿನ್ಸ್ ಡಿಟೈಲ್ಸ್ ಪಡೆಯಲು ಪ್ರಯತ್ನಿಸುತ್ತಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಈ ತಂತ್ರಗಾರಿಕೆಯಿಂದ ಜನರನ್ನು ವಂಚಿಸಲು ಯತ್ನಿಸುತ್ತಿರುವ ಈ ದುಷ್ಕರ್ಮಿಗಳ ವಿರುದ್ಧ ತಾವು ಸೈಬರ್ ಕ್ರೈಂ ಇಲಾಖೆಗೆ ದೂರು ನೀಡುತ್ತಿರುವುದಾಗಿ ನಟಿ ತಿಳಿಸಿದ್ದಾರೆ.

ಜನಪ್ರಿಯ ನಟಿ ಶರಣ್ಯ ಶೆಟ್ಟಿ

ಶರಣ್ಯ ಶೆಟ್ಟಿ, ಕಿರುತೆರೆಯ ‘ಗಟ್ಟಿಮೇಳ’ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ಗಮನ ಸೆಳೆದವರು. ನಂತರ ಅವರು ಹಲವಾರು ಹಿರಿತೆರೆ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ, ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜತೆಯೂ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಈ ಘಟನೆ ಸಂಬಂಧ, ಶರಣ್ಯ ಅಭಿಮಾನಿಗಳಿಗೆ ಎಚ್ಚರಿಕೆ ನೀಡುತ್ತಾ, ಯಾವುದೇ ವಂಚನೆಗೊಳಗಾಗದಂತೆ ಜಾಗರೂಕರಾಗುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago