Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago