Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 hour ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

3 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago