Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago