Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 hour ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

1 hour ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

1 hour ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

1 hour ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

6 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

6 hours ago