Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

45 minutes ago

ಕೊಡಗು ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಸಾವು: ‘ಹನಿಟ್ರ್ಯಾಪ್‌, ಸುಳ್ಳು ಪ್ರಕರಣ’ ಆರೋಪಗಳಿಂದ ಪ್ರಕರಣಕ್ಕೆ ಹೊಸ ತಿರುವು

ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…

48 minutes ago

ಶಿವಾಜಿನಗರ ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

1 hour ago

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

17 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

17 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

19 hours ago