Crime

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ 346 ಅಸಹಜ ಸಾವು- ನಟ ಚೇತನ ಅಹಿಂಸ

2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.

YouTube ವಿಡಿಯೋದಿಂದ ಹೊಸ ಚರ್ಚೆ

ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್‌ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.

ನಟ ಚೇತನ್ ಅಹಿಂಸ ಪ್ರತಿಕ್ರಿಯೆ

ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.

  • ಸೌಜನ್ಯ ತಾಯಿಯೊಂದಿಗೆ ಮಾತನಾಡಿದ ಮಾಹಿತಿ ಹಂಚಿಕೊಂಡು, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ಅಸಹಜ ಸಾವುಗಳು ಬೆಳ್ತಂಗಡಿಯಲ್ಲಿ ಸಂಭವಿಸಿವೆ. 346 ಪ್ರಕರಣಗಳಿರುವ ಮಾಹಿತಿ ನನಗೆ ಸಿಕ್ಕಿದೆ. ಈ ಪ್ರಭಾವಿಗಳಿಗೆ ಹಣ, ರಾಜಕೀಯ, ಧರ್ಮ, ಜಾತಿ, ಮತ್ತು ಬಲವಂತದ ಬೆಂಬಲ ಇದೆ. ಜನಶಕ್ತಿ, ಸಂವಿಧಾನ ಶಕ್ತಿ, ಕಾನೂನು ಶಕ್ತಿ ಇಲ್ಲಿಗೆ ಸಾಕಾಗುತ್ತಿಲ್ಲ” ಎಂದು ತಿಳಿಸಿದ್ದಾರೆ.

YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು

  • ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಿಸಿದ್ದರೂ, ಹೈಕೋರ್ಟ್ ಈ ದೂರು ರದ್ದು ಮಾಡಿದೆ.
  • ಚೇತನ್, “Article 19 ಪ್ರಕಾರ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಆದರೆ ಪ್ರಭಾವಿಗಳಿಗೆ ಮುತ್ತಿನ ಹಾರ ಹಾಕಲಾಗುತ್ತದೆ, ಸಾಮಾನ್ಯರು ಸತ್ಯ ಹೇಳಿದರೆ ದಬ್ಬಾಳಿಕೆ ಎದುರಿಸಬೇಕಾಗುತ್ತದೆ. ಈ ಪ್ರಕರಣಕ್ಕೆ ನ್ಯಾಯ ದೊರಕಿಸಲು ನಾವು ಸಿದ್ಧರಾಗಬೇಕು, ಜೈಲಿಗೆ ಹೋಗಬೇಕಾದರೂ ಹಿಂತಿರುಗಬೇಡಿ” ಎಂದು ಹೇಳಿದರು.

ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ

ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago