Crime

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ 346 ಅಸಹಜ ಸಾವು- ನಟ ಚೇತನ ಅಹಿಂಸ

2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.

YouTube ವಿಡಿಯೋದಿಂದ ಹೊಸ ಚರ್ಚೆ

ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್‌ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.

ನಟ ಚೇತನ್ ಅಹಿಂಸ ಪ್ರತಿಕ್ರಿಯೆ

ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.

  • ಸೌಜನ್ಯ ತಾಯಿಯೊಂದಿಗೆ ಮಾತನಾಡಿದ ಮಾಹಿತಿ ಹಂಚಿಕೊಂಡು, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ಅಸಹಜ ಸಾವುಗಳು ಬೆಳ್ತಂಗಡಿಯಲ್ಲಿ ಸಂಭವಿಸಿವೆ. 346 ಪ್ರಕರಣಗಳಿರುವ ಮಾಹಿತಿ ನನಗೆ ಸಿಕ್ಕಿದೆ. ಈ ಪ್ರಭಾವಿಗಳಿಗೆ ಹಣ, ರಾಜಕೀಯ, ಧರ್ಮ, ಜಾತಿ, ಮತ್ತು ಬಲವಂತದ ಬೆಂಬಲ ಇದೆ. ಜನಶಕ್ತಿ, ಸಂವಿಧಾನ ಶಕ್ತಿ, ಕಾನೂನು ಶಕ್ತಿ ಇಲ್ಲಿಗೆ ಸಾಕಾಗುತ್ತಿಲ್ಲ” ಎಂದು ತಿಳಿಸಿದ್ದಾರೆ.

YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು

  • ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಿಸಿದ್ದರೂ, ಹೈಕೋರ್ಟ್ ಈ ದೂರು ರದ್ದು ಮಾಡಿದೆ.
  • ಚೇತನ್, “Article 19 ಪ್ರಕಾರ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಆದರೆ ಪ್ರಭಾವಿಗಳಿಗೆ ಮುತ್ತಿನ ಹಾರ ಹಾಕಲಾಗುತ್ತದೆ, ಸಾಮಾನ್ಯರು ಸತ್ಯ ಹೇಳಿದರೆ ದಬ್ಬಾಳಿಕೆ ಎದುರಿಸಬೇಕಾಗುತ್ತದೆ. ಈ ಪ್ರಕರಣಕ್ಕೆ ನ್ಯಾಯ ದೊರಕಿಸಲು ನಾವು ಸಿದ್ಧರಾಗಬೇಕು, ಜೈಲಿಗೆ ಹೋಗಬೇಕಾದರೂ ಹಿಂತಿರುಗಬೇಡಿ” ಎಂದು ಹೇಳಿದರು.

ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ

ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

17 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

17 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

17 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

17 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

17 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago