Crime

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ 346 ಅಸಹಜ ಸಾವು- ನಟ ಚೇತನ ಅಹಿಂಸ

2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.

YouTube ವಿಡಿಯೋದಿಂದ ಹೊಸ ಚರ್ಚೆ

ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್‌ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.

ನಟ ಚೇತನ್ ಅಹಿಂಸ ಪ್ರತಿಕ್ರಿಯೆ

ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.

  • ಸೌಜನ್ಯ ತಾಯಿಯೊಂದಿಗೆ ಮಾತನಾಡಿದ ಮಾಹಿತಿ ಹಂಚಿಕೊಂಡು, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ಅಸಹಜ ಸಾವುಗಳು ಬೆಳ್ತಂಗಡಿಯಲ್ಲಿ ಸಂಭವಿಸಿವೆ. 346 ಪ್ರಕರಣಗಳಿರುವ ಮಾಹಿತಿ ನನಗೆ ಸಿಕ್ಕಿದೆ. ಈ ಪ್ರಭಾವಿಗಳಿಗೆ ಹಣ, ರಾಜಕೀಯ, ಧರ್ಮ, ಜಾತಿ, ಮತ್ತು ಬಲವಂತದ ಬೆಂಬಲ ಇದೆ. ಜನಶಕ್ತಿ, ಸಂವಿಧಾನ ಶಕ್ತಿ, ಕಾನೂನು ಶಕ್ತಿ ಇಲ್ಲಿಗೆ ಸಾಕಾಗುತ್ತಿಲ್ಲ” ಎಂದು ತಿಳಿಸಿದ್ದಾರೆ.

YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು

  • ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಿಸಿದ್ದರೂ, ಹೈಕೋರ್ಟ್ ಈ ದೂರು ರದ್ದು ಮಾಡಿದೆ.
  • ಚೇತನ್, “Article 19 ಪ್ರಕಾರ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಆದರೆ ಪ್ರಭಾವಿಗಳಿಗೆ ಮುತ್ತಿನ ಹಾರ ಹಾಕಲಾಗುತ್ತದೆ, ಸಾಮಾನ್ಯರು ಸತ್ಯ ಹೇಳಿದರೆ ದಬ್ಬಾಳಿಕೆ ಎದುರಿಸಬೇಕಾಗುತ್ತದೆ. ಈ ಪ್ರಕರಣಕ್ಕೆ ನ್ಯಾಯ ದೊರಕಿಸಲು ನಾವು ಸಿದ್ಧರಾಗಬೇಕು, ಜೈಲಿಗೆ ಹೋಗಬೇಕಾದರೂ ಹಿಂತಿರುಗಬೇಡಿ” ಎಂದು ಹೇಳಿದರು.

ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ

ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

2 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

6 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

6 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

7 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

16 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

17 hours ago