Crime

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ 346 ಅಸಹಜ ಸಾವು- ನಟ ಚೇತನ ಅಹಿಂಸ

2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.

YouTube ವಿಡಿಯೋದಿಂದ ಹೊಸ ಚರ್ಚೆ

ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್‌ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.

ನಟ ಚೇತನ್ ಅಹಿಂಸ ಪ್ರತಿಕ್ರಿಯೆ

ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.

  • ಸೌಜನ್ಯ ತಾಯಿಯೊಂದಿಗೆ ಮಾತನಾಡಿದ ಮಾಹಿತಿ ಹಂಚಿಕೊಂಡು, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ಅಸಹಜ ಸಾವುಗಳು ಬೆಳ್ತಂಗಡಿಯಲ್ಲಿ ಸಂಭವಿಸಿವೆ. 346 ಪ್ರಕರಣಗಳಿರುವ ಮಾಹಿತಿ ನನಗೆ ಸಿಕ್ಕಿದೆ. ಈ ಪ್ರಭಾವಿಗಳಿಗೆ ಹಣ, ರಾಜಕೀಯ, ಧರ್ಮ, ಜಾತಿ, ಮತ್ತು ಬಲವಂತದ ಬೆಂಬಲ ಇದೆ. ಜನಶಕ್ತಿ, ಸಂವಿಧಾನ ಶಕ್ತಿ, ಕಾನೂನು ಶಕ್ತಿ ಇಲ್ಲಿಗೆ ಸಾಕಾಗುತ್ತಿಲ್ಲ” ಎಂದು ತಿಳಿಸಿದ್ದಾರೆ.

YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು

  • ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಿಸಿದ್ದರೂ, ಹೈಕೋರ್ಟ್ ಈ ದೂರು ರದ್ದು ಮಾಡಿದೆ.
  • ಚೇತನ್, “Article 19 ಪ್ರಕಾರ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಆದರೆ ಪ್ರಭಾವಿಗಳಿಗೆ ಮುತ್ತಿನ ಹಾರ ಹಾಕಲಾಗುತ್ತದೆ, ಸಾಮಾನ್ಯರು ಸತ್ಯ ಹೇಳಿದರೆ ದಬ್ಬಾಳಿಕೆ ಎದುರಿಸಬೇಕಾಗುತ್ತದೆ. ಈ ಪ್ರಕರಣಕ್ಕೆ ನ್ಯಾಯ ದೊರಕಿಸಲು ನಾವು ಸಿದ್ಧರಾಗಬೇಕು, ಜೈಲಿಗೆ ಹೋಗಬೇಕಾದರೂ ಹಿಂತಿರುಗಬೇಡಿ” ಎಂದು ಹೇಳಿದರು.

ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ

ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago