ಬೆಂಗಳೂರು: ನಗರದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಬುಧವಾರ ಮಧ್ಯರಾತ್ರಿ, ರಿಂಗ್ ರಸ್ತೆಯ ಭವಾನಿ ನಗರದ ಪೂಜಾರಿ ಚೌಕ್ ಬಳಿ ಇರುವ ಎಸ್ಬಿಐ ಎಟಿಎಂನಿಗೆ ಅನಾಮಿಕ ದರೋಡಿಗರು ನುಗ್ಗಿ ಸುಮಾರು 18 ಲಕ್ಷ ರೂ. ನಗದು ದೋಚಿದ್ದಾರೆ.
ಎಟಿಎಂ ರೂಂ ಒಳಗೆ ನುಗ್ಗಿದ ಅಪರಿಚಿತರು ಮೊದಲು ಭದ್ರತಾ ಕ್ಯಾಮರಾಗಳ ಮೇಲೆ ಸ್ಪ್ರೇ ಹಾಕಿ ಅವುಗಳನ್ನು ಕಾರ್ಯನಿರತವಾಗಿರದಂತೆ ಮಾಡಿದರು. ಬಳಿಕ ಎಟಿಎಂ ಯಂತ್ರವನ್ನು ಜಖಂ ಮಾಡಿ ಅದರೊಳಗಿನ ನಗದು ಹಣವನ್ನು ಕಸಿದುಕೊಂಡು ಪರಾರಿಯಾದರು ಎನ್ನಲಾಗಿದೆ. ಮೊದಲಿನ ಮಾಹಿತಿಯ ಪ್ರಕಾರ, ಕೇವಲ 18 ಲಕ್ಷ ರೂ.ವಷ್ಟೇ ಅಲ್ಲ, ಇನ್ನಷ್ಟು ಹಣವನ್ನು ಕಳ್ಳರು ದೋಚಿರುವ ಶಂಕೆಯೂ ವ್ಯಕ್ತವಾಗಿದೆ.
ಈ ಕುರಿತು ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧಿಸಿ ಹೆಚ್ಚಿನ ಮಾಹಿತಿ ಇನ್ನೂ ಬಹಿರಂಗವಾಗಬೇಕಿದೆ. ಭದ್ರತಾ ದೃಶ್ಯಾವಳಿ, ಸ್ಥಳದ ಪರಿಶೀಲನೆ ಹಾಗೂ ಆಂತರಿಕ ಮಾಹಿತಿ ಆಧರಿಸಿ ತನಿಖೆ ಮುಂದುವರಿಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…