ನಗರದ ಕರಾಡಿಮೊಲ್ಲಾದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 5ನೇ ತರಗತಿಯ ವಿದ್ಯಾರ್ಥಿ ರೆಹಮಾನ್ ಅವರ ಮೇಲೆ ಆಂಗ್ಲ ಭಾಷೆ ಶಿಕ್ಷಕ ಮಲ್ಲೇಶ್ ಅಮಾನವೀಯವಾಗಿ ಹಿಂಸೆ ಹೇರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆಯ ವಿವರಗಳ ಪ್ರಕಾರ, ಶಿಕ್ಷಕ ಮಲ್ಲೇಶ್ ವಿದ್ಯಾರ್ಥಿಯ ಕೆನ್ನೆ ಮತ್ತು ಬೆನ್ನಿನ ಮೇಲೆ ಬರೆ ಬರುವಂತೆ ಹೊಡೆದಿದ್ದು, ದೇಹದಲ್ಲಿ ಬೆರಳಿನ ಗುರುತುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೋಷಕರು ಕೋಪೋದ್ರಿಕ್ತರಾಗಿ ವಿದ್ಯಾರ್ಥಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಕರೆದುಕೊಂಡು ಹೋಗಿ ಶಿಕ್ಷಕನ ವಿರುದ್ಧ ದೂರು ಸಲ್ಲಿಸಿದರು.
ಪೋಷಕರ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಶಿಕ್ಷಕ ಮಲ್ಲೇಶ್ ಅವರನ್ನು ಕಚೇರಿಗೆ ಕರೆಯಿಸಿ ವಿಚಾರಣೆ ನಡೆಸಿದರು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಪುನಾರಾವೃತವಾಗದಂತೆ ಎಚ್ಚರಿಕೆ ನೀಡಿದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ಮಕ್ಕಳನ್ನು ಹೊಡೆಯದೆ ಪ್ರೀತಿ, ಸಹನೆಯೊಂದಿಗೆ ಬೋಧನೆ ನೀಡಬೇಕು ಎಂದು ತೀವ್ರ ಸೂಚನೆ ನೀಡಿದರು.
ಈ ಸಂಬಂಧ ಪೋಷಕರು, ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಅವಸರದಲ್ಲಿ ಅವರ ಅಮಾನತು ಮತ್ತು ಮುಂದಿನ ಪರಿಶೀಲನೆಗೆ ಅಧಿಕಾರಿಗಳು ಸ್ಪಷ್ಟತೆ ನೀಡಬೇಕೆಂದು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…