ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಸ್ಯೆ ಬಗೆಹರಿಯದ ಕಾರಣ, ರಾಜ್ಯಮಟ್ಟದಲ್ಲಿ ಎರಡನೇ ಹಂತದ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
*ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದು.
*ತಾಂತ್ರಿಕ ಹುದ್ದೆಗಳಿಗೆ ನಿಗದಿಯಿರುವ ವೇತನ ಶ್ರೇಣಿಯನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೂ ಅನ್ವಯಿಸುವಂತೆ ಆದೇಶ ಹೊರಡಿಸುವುದು.
*ಸೇವಾ ನಿಯಮಗಳ ಸುಧಾರಣೆ ಮತ್ತು ಸೌಲಭ್ಯ ವೃದ್ಧಿ.
*ಅಂತರ್ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸುವುದು ಅಥವಾ ಕಂದಾಯ ಇಲಾಖೆಗೆ ವಿಶೇಷ ವರ್ಗಾವಣೆ ಮಾರ್ಗಸೂಚಿ ರೂಪಿಸುವುದು.
*ಅನುಕಂಪದ ನೇಮಕಾತಿಗೆ ತಿದ್ದುಪಡಿ ಮಾಡುವುದು.
*ಕರ್ತವ್ಯ ನಿರ್ವಹಣೆ ವೇಳೆ ಜೀವಹಾನಿ ಸಂಭವಿಸಿದರೆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡುವುದು.
ಗ್ರಾಮ ಲೆಕ್ಕಾಧಿಕಾರಿಗಳ ಪ್ರಕಾರ, ಸರ್ಕಾರ ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಸೌಲಭ್ಯ ಒದಗಿಸುತ್ತದೆ, ಆದರೆ ಹೆಚ್ಚಿನ ಕೆಲಸದ ಹೊರೆ ಹೊತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ ಎಂದು ಹುಕ್ಕೇರಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರದಿ: ಅರುಣ್ ಕುಮಾರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…