ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಸ್ಯೆ ಬಗೆಹರಿಯದ ಕಾರಣ, ರಾಜ್ಯಮಟ್ಟದಲ್ಲಿ ಎರಡನೇ ಹಂತದ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
*ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದು.
*ತಾಂತ್ರಿಕ ಹುದ್ದೆಗಳಿಗೆ ನಿಗದಿಯಿರುವ ವೇತನ ಶ್ರೇಣಿಯನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೂ ಅನ್ವಯಿಸುವಂತೆ ಆದೇಶ ಹೊರಡಿಸುವುದು.
*ಸೇವಾ ನಿಯಮಗಳ ಸುಧಾರಣೆ ಮತ್ತು ಸೌಲಭ್ಯ ವೃದ್ಧಿ.
*ಅಂತರ್ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸುವುದು ಅಥವಾ ಕಂದಾಯ ಇಲಾಖೆಗೆ ವಿಶೇಷ ವರ್ಗಾವಣೆ ಮಾರ್ಗಸೂಚಿ ರೂಪಿಸುವುದು.
*ಅನುಕಂಪದ ನೇಮಕಾತಿಗೆ ತಿದ್ದುಪಡಿ ಮಾಡುವುದು.
*ಕರ್ತವ್ಯ ನಿರ್ವಹಣೆ ವೇಳೆ ಜೀವಹಾನಿ ಸಂಭವಿಸಿದರೆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡುವುದು.
ಗ್ರಾಮ ಲೆಕ್ಕಾಧಿಕಾರಿಗಳ ಪ್ರಕಾರ, ಸರ್ಕಾರ ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಸೌಲಭ್ಯ ಒದಗಿಸುತ್ತದೆ, ಆದರೆ ಹೆಚ್ಚಿನ ಕೆಲಸದ ಹೊರೆ ಹೊತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ ಎಂದು ಹುಕ್ಕೇರಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರದಿ: ಅರುಣ್ ಕುಮಾರ್
ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…
ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್ಸಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…
ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…