Latest

ಗ್ರಾಮ ಲೆಕ್ಕಾಧಿಕಾರಿಗಳ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಸ್ಯೆ ಬಗೆಹರಿಯದ ಕಾರಣ, ರಾಜ್ಯಮಟ್ಟದಲ್ಲಿ ಎರಡನೇ ಹಂತದ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಬೇಡಿಕೆಗಳು:

*ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದು.

*ತಾಂತ್ರಿಕ ಹುದ್ದೆಗಳಿಗೆ ನಿಗದಿಯಿರುವ ವೇತನ ಶ್ರೇಣಿಯನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೂ ಅನ್ವಯಿಸುವಂತೆ ಆದೇಶ ಹೊರಡಿಸುವುದು.

*ಸೇವಾ ನಿಯಮಗಳ ಸುಧಾರಣೆ ಮತ್ತು ಸೌಲಭ್ಯ ವೃದ್ಧಿ.

*ಅಂತರ್ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸುವುದು ಅಥವಾ ಕಂದಾಯ ಇಲಾಖೆಗೆ ವಿಶೇಷ ವರ್ಗಾವಣೆ ಮಾರ್ಗಸೂಚಿ ರೂಪಿಸುವುದು.

*ಅನುಕಂಪದ ನೇಮಕಾತಿಗೆ ತಿದ್ದುಪಡಿ ಮಾಡುವುದು.

*ಕರ್ತವ್ಯ ನಿರ್ವಹಣೆ ವೇಳೆ ಜೀವಹಾನಿ ಸಂಭವಿಸಿದರೆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡುವುದು.

ಗ್ರಾಮ ಲೆಕ್ಕಾಧಿಕಾರಿಗಳ ಪ್ರಕಾರ, ಸರ್ಕಾರ ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಸೌಲಭ್ಯ ಒದಗಿಸುತ್ತದೆ, ಆದರೆ ಹೆಚ್ಚಿನ ಕೆಲಸದ ಹೊರೆ ಹೊತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ ಎಂದು ಹುಕ್ಕೇರಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರದಿ: ಅರುಣ್ ಕುಮಾರ್

nazeer ahamad

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

55 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

2 hours ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

2 hours ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

2 hours ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

21 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago