ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಸ್ಯೆ ಬಗೆಹರಿಯದ ಕಾರಣ, ರಾಜ್ಯಮಟ್ಟದಲ್ಲಿ ಎರಡನೇ ಹಂತದ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
*ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದು.
*ತಾಂತ್ರಿಕ ಹುದ್ದೆಗಳಿಗೆ ನಿಗದಿಯಿರುವ ವೇತನ ಶ್ರೇಣಿಯನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೂ ಅನ್ವಯಿಸುವಂತೆ ಆದೇಶ ಹೊರಡಿಸುವುದು.
*ಸೇವಾ ನಿಯಮಗಳ ಸುಧಾರಣೆ ಮತ್ತು ಸೌಲಭ್ಯ ವೃದ್ಧಿ.
*ಅಂತರ್ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸುವುದು ಅಥವಾ ಕಂದಾಯ ಇಲಾಖೆಗೆ ವಿಶೇಷ ವರ್ಗಾವಣೆ ಮಾರ್ಗಸೂಚಿ ರೂಪಿಸುವುದು.
*ಅನುಕಂಪದ ನೇಮಕಾತಿಗೆ ತಿದ್ದುಪಡಿ ಮಾಡುವುದು.
*ಕರ್ತವ್ಯ ನಿರ್ವಹಣೆ ವೇಳೆ ಜೀವಹಾನಿ ಸಂಭವಿಸಿದರೆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡುವುದು.
ಗ್ರಾಮ ಲೆಕ್ಕಾಧಿಕಾರಿಗಳ ಪ್ರಕಾರ, ಸರ್ಕಾರ ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಸೌಲಭ್ಯ ಒದಗಿಸುತ್ತದೆ, ಆದರೆ ಹೆಚ್ಚಿನ ಕೆಲಸದ ಹೊರೆ ಹೊತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ ಎಂದು ಹುಕ್ಕೇರಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರದಿ: ಅರುಣ್ ಕುಮಾರ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…