ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ. ಕೋಟಾ ಮಂಡಲ ಕೇಂದ್ರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಏಳು ವರ್ಷದ ಮಗುವಿನ ಮೇಲೆ ಗಂಭೀರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಾಹಿತಿಯ ಪ್ರಕಾರ, ಪತಿ ಮೃತಪಟ್ಟ ಬಳಿಕ ಇಂದ್ರಜಾ ಎಂಬ ಮಹಿಳೆ ತನ್ನ ಏಳು ವರ್ಷದ ಮಗನೊಂದಿಗೆ ವಾಸಿಸುತ್ತಿದ್ದಳು. ಇದೇ ವೇಳೆ ರಾಜು ಎಂಬಾತನೊಂದಿಗೆ ಆಕೆಗೆ ಅಕ್ರಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಬಾಲಕ ಅಡ್ಡಿಯಾಗುತ್ತಿದ್ದಾನೆ ಎಂದು ಆರೋಪಿಸಲಾಗಿದ್ದು, ಇದೇ ಕಾರಣದಿಂದ ತಾಯಿ ಮತ್ತು ಆಕೆಯ ಪ್ರಿಯಕರ ಬಾಲಕನ ಮೇಲೆ ಬ್ಲೇಡ್ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಬಾಲಕನಿಗೆ ಚಿಕಿತ್ಸೆ ನೀಡುತ್ತಿದ್ದು, ಆತನ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.
ಈ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಇಂದ್ರಜಾ ಹಾಗೂ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಮಾಯಕ ಮಗುವಿನ ಮೇಲಿನ ಈ ಅಮಾನವೀಯ ಕೃತ್ಯ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನೋಯ್ಡಾದ ಪ್ರತಿಷ್ಠಿತ ಅಪಾರ್ಟ್ಮೆಂಟ್ ಸೊಸೈಟಿಯೊಂದರಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೇವಲ ₹300 ಮೌಲ್ಯದ ದಿನಸಿ…
ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು…
ಭುವನೇಶ್ವರ: ಪತ್ನಿಯ ಹುಟ್ಟುಹಬ್ಬದಂದು ಆಕೆಗೆ ಸರ್ಪ್ರೈಸ್ ನೀಡಲು ಸಂತಸದಿಂದ ಮನೆಗೆ ಬಂದಿದ್ದ ಇಂಜಿನಿಯರ್ ಒಬ್ಬರು ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ…
ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಗಣಿ ಮತ್ತು ಭೂವಿಜ್ಞಾನ…
ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ತಮ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ತಮ್ಮ ಮಾತಿನಿಂದ ಯಾರಿಗಾದರೂ…
ಮುಂಡಗೋಡ: ಅರಣ್ಯ ವಲಯದ ಇಂದೂರು ಶಾಖೆಯ ನಂದಿಕಟ್ಟ ಗಸ್ತು ವ್ಯಾಪ್ತಿಯಲ್ಲಿ ಜುಲೈ 17ರಂದು ಪತ್ತೆಯಾದ ಅಕ್ರಮ ಜಿಂಕೆ ಮಾಂಸ ಪ್ರಕರಣದ…