ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಮೂಲ ಸೌಲಭ್ಯ ಇಲ್ಲವಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ, ಇದರಿಂದಾಗಿ ಮಲಿನ ನೀರು ರಸ್ತೆ ಮೇಲೆ ನಿಲ್ಲುತ್ತಿದ್ದು ದುರ್ವಾಸನೆ ಹರಡಿದೆ. ಗ್ರಾಮದ ಕೆರೆಯಲ್ಲಿ ಹೂಳು ತುಂಬಿಕೊಂಡು ಹೋಗಿದ್ದು ಕೆರೆಯ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ.
ಕೆರೆಯ ನೀರು ಹಸಿರು ಬಣಕ್ಕೆ ತಿರುಗಿದೆ. ಕಸಗಂಟೆಗಳಿಂದ ಆವೃತವಾಗಿದೆ. ಕೆರೆಗೆ ನೀರು ಬರಲು ಕಾಲುವೆಗೆ ಹೊಂದಿಕೊಂಡಿರುವ ಇನಲೈಟ್ ಕಾಮಗಾರಿ ಪ್ರಾರಂಭವಾಗಬೇಕಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ತಿರ ಇರುವ ಶುದ್ದ ಕುಡಿಯುವ ನೀರಿನ ಘಟಕ ನಿರ್ವಾಹಣೆ ಕೊರತೆಯಿಂದ ಸ್ಥಗತಿಗೊಂಡಿದೆ. ಜನರು ಶುದ್ದ ನೀರಿಗಾಗಿ ಪಟ್ಟಣಕ್ಕೆ ತೆರಳಬೇಕಾಗಿದೆ. ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಬೇಕಾದ ಸಿಸಿ ರಸ್ತೆ ಬಿರುಕು ಬಿಟ್ಟು ಕಳಚಿಕೊಂಡಿದೆ ಹದಗೆಟ್ಟಿರುವ ಸಿಸಿ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಎಡವಿ ನೆಲಕ್ಕೆ ಬಿಳ್ಳುವ ಹಂತಕ್ಕೆ ನಿಂತಿದೆ. ಅಷ್ಟರಮಟ್ಟಿಗೆ ಈ ರಸ್ತೆ ಇದೆ. ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
ಗ್ರಾಮ ಪಂಚಾಯತಿಯವರು ಮೂಲ ಸೌಲಭ್ಯಗಳಿಗೆ ಒತ್ತು ನೀಡಬೇಕು ಎಂಬವುದು ಮರೆತು ಬಿಟ್ಟಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಶುದ್ದ ಕುಡಿಯುವ ನೀರಿನ ಘಟಕ, ರಸ್ತೆ,ಚರಂಡಿ,ಇದ್ಯಾವುದೂ ಮಾಡದೆ ಗ್ರಾಮವನ್ನು ಗಬ್ಬು ನಾರುವು ಹಾಗೆ ಮಾಡಿದ್ದಾರೆ. ಕೂಡಲೇ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಬೇಟೆ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಬೇಕಾಗಿದೆ. ವರದಿ: ಶಾನು ಯಲಿಗಾರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…