ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಮೂಲ ಸೌಲಭ್ಯ ಇಲ್ಲವಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ, ಇದರಿಂದಾಗಿ ಮಲಿನ ನೀರು ರಸ್ತೆ ಮೇಲೆ ನಿಲ್ಲುತ್ತಿದ್ದು ದುರ್ವಾಸನೆ ಹರಡಿದೆ. ಗ್ರಾಮದ ಕೆರೆಯಲ್ಲಿ ಹೂಳು ತುಂಬಿಕೊಂಡು ಹೋಗಿದ್ದು ಕೆರೆಯ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ.
ಕೆರೆಯ ನೀರು ಹಸಿರು ಬಣಕ್ಕೆ ತಿರುಗಿದೆ. ಕಸಗಂಟೆಗಳಿಂದ ಆವೃತವಾಗಿದೆ. ಕೆರೆಗೆ ನೀರು ಬರಲು ಕಾಲುವೆಗೆ ಹೊಂದಿಕೊಂಡಿರುವ ಇನಲೈಟ್ ಕಾಮಗಾರಿ ಪ್ರಾರಂಭವಾಗಬೇಕಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ತಿರ ಇರುವ ಶುದ್ದ ಕುಡಿಯುವ ನೀರಿನ ಘಟಕ ನಿರ್ವಾಹಣೆ ಕೊರತೆಯಿಂದ ಸ್ಥಗತಿಗೊಂಡಿದೆ. ಜನರು ಶುದ್ದ ನೀರಿಗಾಗಿ ಪಟ್ಟಣಕ್ಕೆ ತೆರಳಬೇಕಾಗಿದೆ. ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಬೇಕಾದ ಸಿಸಿ ರಸ್ತೆ ಬಿರುಕು ಬಿಟ್ಟು ಕಳಚಿಕೊಂಡಿದೆ ಹದಗೆಟ್ಟಿರುವ ಸಿಸಿ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಎಡವಿ ನೆಲಕ್ಕೆ ಬಿಳ್ಳುವ ಹಂತಕ್ಕೆ ನಿಂತಿದೆ. ಅಷ್ಟರಮಟ್ಟಿಗೆ ಈ ರಸ್ತೆ ಇದೆ. ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
ಗ್ರಾಮ ಪಂಚಾಯತಿಯವರು ಮೂಲ ಸೌಲಭ್ಯಗಳಿಗೆ ಒತ್ತು ನೀಡಬೇಕು ಎಂಬವುದು ಮರೆತು ಬಿಟ್ಟಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಶುದ್ದ ಕುಡಿಯುವ ನೀರಿನ ಘಟಕ, ರಸ್ತೆ,ಚರಂಡಿ,ಇದ್ಯಾವುದೂ ಮಾಡದೆ ಗ್ರಾಮವನ್ನು ಗಬ್ಬು ನಾರುವು ಹಾಗೆ ಮಾಡಿದ್ದಾರೆ. ಕೂಡಲೇ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಬೇಟೆ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಬೇಕಾಗಿದೆ. ವರದಿ: ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…