ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಮೂಲ ಸೌಲಭ್ಯ ಇಲ್ಲವಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ, ಇದರಿಂದಾಗಿ ಮಲಿನ ನೀರು ರಸ್ತೆ ಮೇಲೆ ನಿಲ್ಲುತ್ತಿದ್ದು ದುರ್ವಾಸನೆ ಹರಡಿದೆ. ಗ್ರಾಮದ ಕೆರೆಯಲ್ಲಿ ಹೂಳು ತುಂಬಿಕೊಂಡು ಹೋಗಿದ್ದು ಕೆರೆಯ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ.
ಕೆರೆಯ ನೀರು ಹಸಿರು ಬಣಕ್ಕೆ ತಿರುಗಿದೆ. ಕಸಗಂಟೆಗಳಿಂದ ಆವೃತವಾಗಿದೆ. ಕೆರೆಗೆ ನೀರು ಬರಲು ಕಾಲುವೆಗೆ ಹೊಂದಿಕೊಂಡಿರುವ ಇನಲೈಟ್ ಕಾಮಗಾರಿ ಪ್ರಾರಂಭವಾಗಬೇಕಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ತಿರ ಇರುವ ಶುದ್ದ ಕುಡಿಯುವ ನೀರಿನ ಘಟಕ ನಿರ್ವಾಹಣೆ ಕೊರತೆಯಿಂದ ಸ್ಥಗತಿಗೊಂಡಿದೆ. ಜನರು ಶುದ್ದ ನೀರಿಗಾಗಿ ಪಟ್ಟಣಕ್ಕೆ ತೆರಳಬೇಕಾಗಿದೆ. ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಬೇಕಾದ ಸಿಸಿ ರಸ್ತೆ ಬಿರುಕು ಬಿಟ್ಟು ಕಳಚಿಕೊಂಡಿದೆ ಹದಗೆಟ್ಟಿರುವ ಸಿಸಿ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಎಡವಿ ನೆಲಕ್ಕೆ ಬಿಳ್ಳುವ ಹಂತಕ್ಕೆ ನಿಂತಿದೆ. ಅಷ್ಟರಮಟ್ಟಿಗೆ ಈ ರಸ್ತೆ ಇದೆ. ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
ಗ್ರಾಮ ಪಂಚಾಯತಿಯವರು ಮೂಲ ಸೌಲಭ್ಯಗಳಿಗೆ ಒತ್ತು ನೀಡಬೇಕು ಎಂಬವುದು ಮರೆತು ಬಿಟ್ಟಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಶುದ್ದ ಕುಡಿಯುವ ನೀರಿನ ಘಟಕ, ರಸ್ತೆ,ಚರಂಡಿ,ಇದ್ಯಾವುದೂ ಮಾಡದೆ ಗ್ರಾಮವನ್ನು ಗಬ್ಬು ನಾರುವು ಹಾಗೆ ಮಾಡಿದ್ದಾರೆ. ಕೂಡಲೇ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಬೇಟೆ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಬೇಕಾಗಿದೆ. ವರದಿ: ಶಾನು ಯಲಿಗಾರ
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…