Categories: Latest

ಚಿಕ್ಕನರ್ತಿ ಗ್ರಾಮದಲ್ಲಿ ಮಲಿನ ನೀರಿನ ಸಮಸ್ಯೆ: ಮೂಲ ಸೌಲಭ್ಯಗಳ ದುರವಸ್ಥೆಗೆ ಅಧಿಕಾರಿಗಳ ನಿರ್ಲಕ್ಷ್ಯ.!

ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಮೂಲ ಸೌಲಭ್ಯ ಇಲ್ಲವಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ, ಇದರಿಂದಾಗಿ ಮಲಿನ ನೀರು ರಸ್ತೆ ಮೇಲೆ ನಿಲ್ಲುತ್ತಿದ್ದು ದುರ್ವಾಸನೆ ಹರಡಿದೆ. ಗ್ರಾಮದ ಕೆರೆಯಲ್ಲಿ ಹೂಳು ತುಂಬಿಕೊಂಡು ಹೋಗಿದ್ದು ಕೆರೆಯ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ.

ಕೆರೆಯ ನೀರು ಹಸಿರು ಬಣಕ್ಕೆ ತಿರುಗಿದೆ. ಕಸಗಂಟೆಗಳಿಂದ ಆವೃತವಾಗಿದೆ. ಕೆರೆಗೆ ನೀರು ಬರಲು ಕಾಲುವೆಗೆ ಹೊಂದಿಕೊಂಡಿರುವ ಇನಲೈಟ್ ಕಾಮಗಾರಿ ಪ್ರಾರಂಭವಾಗಬೇಕಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ತಿರ ಇರುವ ಶುದ್ದ ಕುಡಿಯುವ ನೀರಿನ ಘಟಕ ನಿರ್ವಾಹಣೆ ಕೊರತೆಯಿಂದ ಸ್ಥಗತಿಗೊಂಡಿದೆ. ಜನರು ಶುದ್ದ ನೀರಿಗಾಗಿ ಪಟ್ಟಣಕ್ಕೆ ತೆರಳಬೇಕಾಗಿದೆ. ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಬೇಕಾದ ಸಿಸಿ ರಸ್ತೆ ಬಿರುಕು ಬಿಟ್ಟು ಕಳಚಿಕೊಂಡಿದೆ ಹದಗೆಟ್ಟಿರುವ ಸಿಸಿ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಎಡವಿ ನೆಲಕ್ಕೆ ಬಿಳ್ಳುವ ಹಂತಕ್ಕೆ ನಿಂತಿದೆ. ಅಷ್ಟರಮಟ್ಟಿಗೆ ಈ ರಸ್ತೆ ಇದೆ. ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.

ಗ್ರಾಮ ಪಂಚಾಯತಿಯವರು ಮೂಲ ಸೌಲಭ್ಯಗಳಿಗೆ ಒತ್ತು ನೀಡಬೇಕು ಎಂಬವುದು ಮರೆತು ಬಿಟ್ಟಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಶುದ್ದ ಕುಡಿಯುವ ನೀರಿನ ಘಟಕ, ರಸ್ತೆ,ಚರಂಡಿ,ಇದ್ಯಾವುದೂ ಮಾಡದೆ ಗ್ರಾಮವನ್ನು ಗಬ್ಬು ನಾರುವು ಹಾಗೆ ಮಾಡಿದ್ದಾರೆ. ಕೂಡಲೇ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಬೇಟೆ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಬೇಕಾಗಿದೆ. ವರದಿ: ಶಾನು ಯಲಿಗಾರ

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago