Latest

ಮಂಗಳೂರಿನಲ್ಲಿ ಬ್ಯೂಟಿ ಪಾರ್ಲರ್ ಆವರಣದಲ್ಲಿ ಲೈಂಗಿಕ ದಂಧೆ ಬಯಲು

ಮಂಗಳೂರು: ಬ್ಯೂಟಿ ಪಾರ್ಲರ್‌ ಹೆಸರಿನಲ್ಲಿ ಲೈಂಗಿಕ ದಂಧೆ ನಡೆಯುತ್ತಿರುವ ಬೆಚ್ಚಿಬೀಳಿಸುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹಂಪನಕಟ್ಟೆಯಲ್ಲಿರುವ ‘ವೈಬ್ಸ್ ಯೂನಿಸೆಕ್ಸ್ ಸಲೂನ್‌’ ಮಾಲಕಿ ತೃಪ್ತಿ ಭಂಡಾರಿ ಹಾಗೂ ಪತಿ ವಿಪಿನ್ ಭಂಡಾರಿ, ಮಹಿಳಾ ಸಿಬ್ಬಂದಿಯನ್ನು ಪುರುಷ ಗ್ರಾಹಕರಿಗೆ ಲೈಂಗಿಕ ಸೇವೆ ನೀಡಲು ಬಲವಂತಪಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಸಂತ್ರಸ್ತೆಯೊಬ್ಬರಿಂದ ಹೊರಬಿದ್ದಿದೆ.

ಮಾಧ್ಯಮದ ಮುಂದೆ ಕಣ್ಣೀರು ಹಾಕಿದ ಸಂತ್ರಸ್ತೆಯ ಪ್ರಕಾರ, ಪುರುಷ ಗ್ರಾಹಕರು ಬಂದಾಗ ಮಸಾಜ್ ನೀಡಬೇಕು ಎಂದು ಮಾಲಕರು ನಿರಂತರ ಒತ್ತಡ ಹಾಕುತ್ತಿದ್ದರು. ನಿರಾಕರಿಸಿದಾಗ ಬೆದರಿಕೆ ಹಾಕಿ ಕೆಲಸ ಮಾಡಲು ಬಲವಂತ ಮಾಡುತ್ತಿದ್ದರು. ಇತ್ತೀಚೆಗೆ, ಬ್ಯೂಟಿ ಪಾರ್ಲರ್‌ನೊಳಗಿನ ಏಕಾಂತ ಕೊಠಡಿಗೆ ಮಸಾಜ್‌ಗೆ ಹೋಗಿದ್ದಾಗ, ಒಬ್ಬ ಪುರುಷ ಗ್ರಾಹಕ ಲೈಂಗಿಕವಾಗಿ ಸಹಕರಿಸಲು ಒತ್ತಾಯಿಸಿದಂತೆ ತಿಳಿಸಿದರು. ತಾವು ವಿರೋಧ ವ್ಯಕ್ತಪಡಿಸಿದಾಗ, ಮಾಲಕಿ ತೃಪ್ತಿ ಭಂಡಾರಿ ಕೊಠಡಿಗೆ ನುಗ್ಗಿ, ಕಪಾಳಕ್ಕೆ ಬಾರಿಸಿ, ಬಲವಂತವಾಗಿ ಮೇಲುಡುಪು ಕಳಚಿ, ಅರೆನಗ್ನ ಫೋಟೋ ತೆಗೆದಿದ್ದಾರೆಂದು ಆರೋಪಿಸಿದ್ದಾರೆ.

ಈ ಚಿತ್ರವನ್ನು ಮಾಲಕಿ ತಮ್ಮ ಪತಿಗೆ ಕಳುಹಿಸಿದ್ದು, ಇದರಿಂದ ಪತಿ ವಿಚ್ಛೇದನ ಪ್ರಕ್ರಿಯೆ ಆರಂಭಿಸಿರುವುದಾಗಿ ಸಂತ್ರಸ್ತೆ ಕಹಿ ಅನುಭವ ಹಂಚಿಕೊಂಡಿದ್ದಾರೆ.

ಸಂತ್ರಸ್ತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿಗೆ ವಿಷಯ ತಿಳಿಸಿದ್ದು, ಅವರ ಸಲಹೆಯಂತೆ ಅಧಿಕೃತ ದೂರು ದಾಖಲಾಗಿದೆ. ಬಳಿಕ ಮಹಿಳಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸಂಜೆ ಸಲೂನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಗಂಭೀರ ತನಿಖೆ ನಡೆಸಿ, ಸಲೂನ್‌ಗೆ ಬೀಗ ಹಾಕುವ ಸಾಧ್ಯತೆ ಇದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago