ಬೆಂಗಳೂರು ಗ್ರಾಮಾಂತರ: ತಾಯಿತ ಕಟ್ಟುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಬೆಳಕಿಗೆ ಬಂದಿದೆ. ಈ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಕೂತಘಟ್ಟ ಗ್ರಾಮದಲ್ಲಿ ನಡೆದಿದೆ.
ತುಮಕೂರು ಮೂಲದ ಯುವತಿ, ವೈವಾಹಿಕ ಜೀವನದಲ್ಲಿ ಎದುರಾದ ಸಂಕಷ್ಟಗಳಿಂದ ಹೊರಬರಲು ಧಾರ್ಮಿಕ ಸಲಹೆಗಾಗಿ ಮೌಲ್ವಿಯೊಬ್ಬರನ್ನು ಸಂಪರ್ಕಿಸಿದ್ದಳು. ತಾಯಿತ ಕಟ್ಟಿಸುವ ಮೂಲಕ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಭರವಸೆಯೊಂದಿಗೆ ಮೌಲ್ವಿ ಭದ್ರೆ ಆಲಂ ಅವರು ಯುವತಿಯನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡಿದ್ದಾರೆ.
ಆದರೆ, ಆಕೆಯ ನಂಬಿಕೆಗೆ ಧಕ್ಕೆ ನೀಡುವಂತೆ, ಮನೆಯೊಳಗಿನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಕೆಲವು ದಿನಗಳ ಬಳಿಕ ಮಹಿಳೆ ಧೈರ್ಯ ಹೆಚ್ಚಿಸಿಕೊಂಡು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸದ್ಯ, ಪೊಲೀಸರು ಆರೋಪಿ ಭದ್ರೆ ಆಲಂ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ. ಈ ಘಟನೆ ಹಿನ್ನೆಲೆ, ತಂತ್ರ, ತಾಯಿತ ಮುಂತಾದ ಹೆಸರಿನಲ್ಲಿ ಮಹಿಳೆಯರು ಕಿರುಕುಳಕ್ಕೆ ಗುರಿಯಾಗುವ ಪ್ರಕ್ರಿಯೆ ಬಗ್ಗೆ ಗಂಭೀರ ಚಿಂತೆ ವ್ಯಕ್ತವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…