ಬೆಂಗಳೂರು ಗ್ರಾಮಾಂತರ: ತಾಯಿತ ಕಟ್ಟುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಬೆಳಕಿಗೆ ಬಂದಿದೆ. ಈ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಕೂತಘಟ್ಟ ಗ್ರಾಮದಲ್ಲಿ ನಡೆದಿದೆ.
ತುಮಕೂರು ಮೂಲದ ಯುವತಿ, ವೈವಾಹಿಕ ಜೀವನದಲ್ಲಿ ಎದುರಾದ ಸಂಕಷ್ಟಗಳಿಂದ ಹೊರಬರಲು ಧಾರ್ಮಿಕ ಸಲಹೆಗಾಗಿ ಮೌಲ್ವಿಯೊಬ್ಬರನ್ನು ಸಂಪರ್ಕಿಸಿದ್ದಳು. ತಾಯಿತ ಕಟ್ಟಿಸುವ ಮೂಲಕ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಭರವಸೆಯೊಂದಿಗೆ ಮೌಲ್ವಿ ಭದ್ರೆ ಆಲಂ ಅವರು ಯುವತಿಯನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡಿದ್ದಾರೆ.
ಆದರೆ, ಆಕೆಯ ನಂಬಿಕೆಗೆ ಧಕ್ಕೆ ನೀಡುವಂತೆ, ಮನೆಯೊಳಗಿನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಕೆಲವು ದಿನಗಳ ಬಳಿಕ ಮಹಿಳೆ ಧೈರ್ಯ ಹೆಚ್ಚಿಸಿಕೊಂಡು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸದ್ಯ, ಪೊಲೀಸರು ಆರೋಪಿ ಭದ್ರೆ ಆಲಂ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ. ಈ ಘಟನೆ ಹಿನ್ನೆಲೆ, ತಂತ್ರ, ತಾಯಿತ ಮುಂತಾದ ಹೆಸರಿನಲ್ಲಿ ಮಹಿಳೆಯರು ಕಿರುಕುಳಕ್ಕೆ ಗುರಿಯಾಗುವ ಪ್ರಕ್ರಿಯೆ ಬಗ್ಗೆ ಗಂಭೀರ ಚಿಂತೆ ವ್ಯಕ್ತವಾಗಿದೆ.
ದೇವದುರ್ಗ: ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭಾರದಲ್ಲಿದ್ದ ಗ್ರೇಡ್-2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ತೋರಿದ…
ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ…
ಬೆಳ್ತಂಗಡಿ, ಜುಲೈ 31 – ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಿಗೂಢವಾಗಿ ಹೂತ ಶವಗಳ ಮಾಹಿತಿ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕುಡಿಯಲು ಹಣ ಕೇಳಿದ ಮಗನಿಗೆ ತಾಯಿ ನಿಷೇಧಿಸಿದ್ದಕ್ಕೆ…
ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…