ಬೆಂಗಳೂರು ಗ್ರಾಮಾಂತರ: ತಾಯಿತ ಕಟ್ಟುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಬೆಳಕಿಗೆ ಬಂದಿದೆ. ಈ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಕೂತಘಟ್ಟ ಗ್ರಾಮದಲ್ಲಿ ನಡೆದಿದೆ.
ತುಮಕೂರು ಮೂಲದ ಯುವತಿ, ವೈವಾಹಿಕ ಜೀವನದಲ್ಲಿ ಎದುರಾದ ಸಂಕಷ್ಟಗಳಿಂದ ಹೊರಬರಲು ಧಾರ್ಮಿಕ ಸಲಹೆಗಾಗಿ ಮೌಲ್ವಿಯೊಬ್ಬರನ್ನು ಸಂಪರ್ಕಿಸಿದ್ದಳು. ತಾಯಿತ ಕಟ್ಟಿಸುವ ಮೂಲಕ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಭರವಸೆಯೊಂದಿಗೆ ಮೌಲ್ವಿ ಭದ್ರೆ ಆಲಂ ಅವರು ಯುವತಿಯನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡಿದ್ದಾರೆ.
ಆದರೆ, ಆಕೆಯ ನಂಬಿಕೆಗೆ ಧಕ್ಕೆ ನೀಡುವಂತೆ, ಮನೆಯೊಳಗಿನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಕೆಲವು ದಿನಗಳ ಬಳಿಕ ಮಹಿಳೆ ಧೈರ್ಯ ಹೆಚ್ಚಿಸಿಕೊಂಡು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸದ್ಯ, ಪೊಲೀಸರು ಆರೋಪಿ ಭದ್ರೆ ಆಲಂ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ. ಈ ಘಟನೆ ಹಿನ್ನೆಲೆ, ತಂತ್ರ, ತಾಯಿತ ಮುಂತಾದ ಹೆಸರಿನಲ್ಲಿ ಮಹಿಳೆಯರು ಕಿರುಕುಳಕ್ಕೆ ಗುರಿಯಾಗುವ ಪ್ರಕ್ರಿಯೆ ಬಗ್ಗೆ ಗಂಭೀರ ಚಿಂತೆ ವ್ಯಕ್ತವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…